ಪಿರಿಯಾಪಟ್ಟಣ ಬಳಿ ಹುಲಿ ಚರ್ಮ ವಶ: ಆರೋಪಿ ಬಂಧನ
ಮೈಸೂರು, ಅಕ್ಟೋಬರ್.04: ಹುಲಿ ಚರ್ಮವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯನ್ನು ಸಂಚಾರಿ ಅರಣ್ಯ ದಳದ ಸಿಬ್ಬಂದಿ ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ವಲಯಕ್ಕೆ ಹೊಂದಿಕೊಂಡಿರುವ ಸಾಮಾಜಿಕ ಅರಣ್ಯ ಪ್ರದೇಶದ ಚೌತಿ ಗ್ರಾಮದ ನಿವಾಸಿ ಗೋವಿಂದೇಗೌಡ ಎಂಬಾತನೇ ಬಂಧಿತ ಆರೋಪಿ.
ಈತ ಮೂರ್ನಾಲ್ಕು ತಿಂಗಳ ಹಿಂದೆ ತಮ್ಮ ಜಮೀನಿಗೆ ಹೊಂದಿಕೊಂಡಂತಿರುವ ಸಿಲ್ವರ್ ಮರಗಳ ತೋಟಕ್ಕೆ ಉರುಳು ಹಾಕಿದ್ದು, ಅಲ್ಲಿ ಹುಲಿ ಸಿಕ್ಕಿಬಿದ್ದು ಸಾವನ್ನಪಿತ್ತು. ಬಳಿಕ ಅದರ ಚರ್ಮ ತೆಗೆದು ಅದನ್ನು ಮಾರಾಟ ಮಾಡಲು ಇನ್ನಿಬ್ಬರು ಸಹಚರರೊಂದಿಗೆ ಪ್ರಯತ್ನಿಸುತ್ತಿದ್ದನು ಎನ್ನಲಾಗಿದೆ.

ಕಳೆದ ಕೆಲವು ತಿಂಗಳಿನಿಂದಲೇ ಇದರ ಮಾರಾಟ ಮಾಡಲು ಯತ್ನಿಸಿದ್ದನಾದರೂ ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೈಸೂರಿಗೆ ತೆರಳಿ ಮಾರಾಟ ಮಾಡಲು ತೀರ್ಮಾನಿಸಿ ಅದರಂತೆ ಮೈಸೂರಿಗೆ ತೆರಳಲು ಮುಂದಾಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಮೈಸೂರು ಸಂಚಾರಿ ಅರಣ್ಯ ದಳದ ಆರ್ಎಫ್ಓ ಹೆಚ್.ಎಸ್.ಪ್ರಕಾಶ್ ರವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ಮಾಡಿದ್ದು, ಈ ವೇಳೆ ಗೋವಿಂದೇಗೌಡ ಸಿಕ್ಕಿಬಿದ್ದಿದ್ದು ಜತೆಗಿದ್ದ ಇನ್ನಿಬ್ಬರು ಪರಾರಿಯಾಗಿದ್ದಾರೆ.
ಈ ಸಂಬಂಧ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಈ ಸಂದರ್ಭ ಹುಲಿ ಮೂಳೆ ಹಾಗೂ ಉಗುರುಗಳ ಬಗ್ಗೆ ನಿಖರ ಮಾಹಿತಿ ನೀಡಿಲ್ಲವೆಂದು ಹೇಳಲಾಗಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications