ಕೆಆರ್ ಎಸ್ ತುಂಬಿಸಲು ಹೇಮಾವತಿ ಬರಿದಾಗಬೇಕೇ?
ಕೆಆರ್ಎಸ್ ಜಲಾಶಯದಲ್ಲಿ 74 ಅಡಿಯಷ್ಟು ನೀರಷ್ಟೇ ಇತ್ತು. ಆದರೆ ಹೇಮಾವತಿ ಜಲಾಶಯದಿಂದ ಸುಮಾರು ಆರು ದಿನಗಳ ಕಾಲ ನೀರು ಹರಿಸಿದ್ದರಿಂದ ಸುಮಾರು 81.50 ಅಡಿಗೆ ಏರಿಕೆ ಕಂಡಿದೆ. ಒಟ್ಟಾರೆ ಸುಮಾರು 1.661 ಟಿಎಂಸಿ ನೀರು ಹರಿದು ಬಂದಿದೆ.
ಮೈಸೂರು, ಮಾರ್ಚ್ 6: ಕೊಡಗಿನಲ್ಲಿ ಮಳೆಯಾದರೆ ಮಾತ್ರವೇ ಕೆಆರ್ಎಸ್ ಗೆ ನೀರು. ಈ ಬಾರಿಯಂತೂ ತೀವ್ರ ಜಲಕ್ಷಾಮದಿಂದ ತಳಸೇರಿದ್ದ ಕೆಆರ್ ಎಸ್ ಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಿದ ಪರಿಣಾಮ ಜಲಾಶಯ ಸ್ವಲ್ಪ ಮಟ್ಟಿಗೆ ಚೇತರಿಕೆ ಕಂಡಿದೆ.
ಇದು ಸಮಾಧಾನ ಪಟ್ಟುಕೊಳ್ಳುವ ವಿಚಾರವಲ್ಲವೇ ಅಲ್ಲ. ಏಕೆಂದರೆ ಮೊದಲನೆಯದಾಗಿ ಇದು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ, ಅಲ್ಲದೆ ಹೇಮಾವತಿ ಜಲಾಶಯದಿಂದ ಹಾಸನ ವ್ಯಾಪ್ತಿಯ ಜನರ ನೀರನ್ನು ಕಸಿದು ಕೆಆರ್ ಎಸ್ ತುಂಬಿಸುವ ಕೆಲಸವಾಗಿದೆ. ಹೀಗಾಗಿ ಆ ವ್ಯಾಪ್ತಿಯ ಜನ ಆಕ್ರೋಶಗೊಂಡಿದ್ದಾರೆ.[ಬರದ ಸಮಸ್ಯೆಯನ್ನು ಎದುರಿಸುವಲ್ಲಿ ಸಿದ್ದು ಸೋತಿದ್ದಾರೆ: ದೇವೇಗೌಡ]

ಮತ್ತೊಂದೆಡೆ ಬರಿದಾದ ಹೇಮಾವತಿ ಜಲಾಶಯವನ್ನು ತುಂಬಿಸಲು ಬೇಲೂರು ಬಳಿಯಿರುವ ಯಗಚಿ ಜಲಾಶಯದಿಂದ ನೀರನ್ನು ಬಿಡಲಾಗಿದೆ. ಸದ್ಯ ಕುಡಿಯುವ ನೀರನ್ನು ಸಮರ್ಪಕವಾಗಿ ಜನತೆಗೆ ತಲುಪಿಸುವ ಸಲುವಾಗಿ ಸರ್ಕಾರ ಸರ್ಕಸ್ ಮಾಡುತ್ತಿದೆಯಾದರೂ ಒಬ್ಬರಿಗೆ ಒಳಿತಾದರೆ ಮತ್ತೊಬ್ಬರಿಗೆ ತೊಂದರೆ ತಪ್ಪಿದ್ದಲ್ಲ.[ಕೆಆರೆಸ್ ನಲ್ಲಿ ಕಾಣುತ್ತಿದೆ ನೆಲ, ಬೆಂಗಳೂರಿಗರ ಪಾಲಿಗೆ ಕೆಟ್ಟಕಾಲ]
ಕೆಆರ್ಎಸ್ ಜಲಾಶಯದಲ್ಲಿ 74 ಅಡಿಯಷ್ಟು ನೀರಷ್ಟೇ ಇತ್ತು. ಆದರೆ ಹೇಮಾವತಿ ಜಲಾಶಯದಿಂದ ಸುಮಾರು ಆರು ದಿನಗಳ ಕಾಲ ನೀರು ಹರಿಸಿದ್ದರಿಂದ ಸುಮಾರು 81.50 ಅಡಿಗೆ ಏರಿಕೆ ಕಂಡಿದೆ. ಒಟ್ಟಾರೆ ಸುಮಾರು 1.661 ಟಿಎಂಸಿ ನೀರು ಹರಿದು ಬಂದಿದೆ.
ಇದರಿಂದ ಸದ್ಯದ ಸ್ಥಿತಿಯಲ್ಲಿ 3.154 ಟಿಎಂಸಿ ನೀರು ಸಂಗ್ರಹವಾಯಿತ್ತಾದರೂ ಶನಿವಾರ ಬೆಳಗ್ಗೆ ಜಲಾಶಯದಿಂದ 1080 ಕ್ಯುಸೆಕ್ ನೀರನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಮಂಡ್ಯ ನಗರಗಳಿಗೆ ಕುಡಿಯುವ ಉದ್ದೇಶದಿಂದ ಬಿಡಲಾಗಿದೆ. ಇದರಿಂದಾಗಿ ಈಗ ಒಟ್ಟಾರೆ ಬಳಕೆಗೆ ಯೋಗ್ಯವಾದ ನೀರಿನ ಸಂಗ್ರಹ 3.085 ಟಿಎಂಸಿಯಷ್ಟಿದೆ ಎಂದು ಹೇಳಲಾಗುತ್ತಿದೆ.[ಜಲಾಶಯಗಳು ಖಾಲಿ ಖಾಲಿ ಎದುರಾಗಲಿದೆ ನೀರಿನ ಸಮಸ್ಯೆ]
ಇಷ್ಟು ನೀರಿನಿಂದಲೇ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರಿಗೆ ಕುಡಿಯುವ ನೀರನ್ನು ಸರಬರಾಜು ಮಾಡಬೇಕಾಗಿದೆ. ಇದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications