ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾದಿಂದ ನಂಜನಗೂಡಿನಲ್ಲಿ ನಡೆಯಿತು ಪುಟ್ಟ ರಥೋತ್ಸವ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 04: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾರಥೋತ್ಸವ ರದ್ದಾಗಿದೆ. ಆದರೆ ದೇವಾಲಯದ ಒಳಗೆ ದೇವಾಲಯದ ಆಡಳಿತ ಮಂಡಳಿಯಿಂದ ಸಾಂಪ್ರದಾಯಿಕ ಪೂಜೆಗೆ ಅನುಮತಿ ನೀಡಲಾಗಿತ್ತು.

ಹೀಗಾಗಿ ರಥೋತ್ಸವವನ್ನು ಸಾಂಕೇತಿಕವಾಗಿ ಇಂದು ನಡೆಸಲಾಯಿತು. ದೊಡ್ಡ ತೇರಿನ ಬದಲು ಪುಟಾಣಿ ತೇರಿನ ಮೂಲಕ ರಥೋತ್ಸವ ನಡೆಸಲಾಯಿತು. ರಥೋತ್ಸವಕ್ಕೆ ಲಕ್ಷ ಮಂದಿ ಸೇರುವ ಜಾಗದಲ್ಲಿ‌ ಕೇವಲ‌ 5 ಮಂದಿ ಇದ್ದರು. ಈ ಹಿನ್ನೆಲೆಯಲ್ಲಿ ಅರ್ಚಕರು, ಕೆಲವು ಸಿಬ್ಬಂದಿ ಸೇರಿ ಸರಳ ಆಚರಣೆ ಮಾಡಿದರು.

 ನಂಜನಗೂಡಿನಲ್ಲಿ ನಾಳೆ ನಡೆಯಬೇಕಿದ್ದ ಪ್ರಸಿದ್ಧ ಪಂಚಮಹಾರಥೋತ್ಸವ ರದ್ದು ನಂಜನಗೂಡಿನಲ್ಲಿ ನಾಳೆ ನಡೆಯಬೇಕಿದ್ದ ಪ್ರಸಿದ್ಧ ಪಂಚಮಹಾರಥೋತ್ಸವ ರದ್ದು

ನಂಜನಗೂಡು ಯುವ ಬ್ರಿಗೇಡ್ ಯುವಕರು ಚಿಕ್ಕ ತೇರು ನಿರ್ಮಿಸಿ ದೇವಸ್ಥಾನದ ಸುತ್ತ ಎಳೆದರು. ಮುಂಜಾನೆ 5.30ಕ್ಕೆ ದೇವಸ್ಥಾನದ ಹೊರ ಭಾಗದಲ್ಲಿ‌ ಪೂಜೆ ಸಲ್ಲಿಸಿ ರಥೋತ್ಸವ್ಕೆ ಚಾಲನೆ ನೀಡಲಾಯಿತು. ದೇವಾಲಯದ ಒಳ ಆವರಣದಲ್ಲೇ ಪುಟ್ಟ ರಥದಲ್ಲಿ ಉತ್ಸವ ಮೂರ್ತಿ ಪೂಜೆ ನಡೆಯಿತು.

Traditional Nanjanagudu Rathotsava Celebrated In Simple Way

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೆ ನಂಜನಗೂಡು ಸಂಪೂರ್ಣ ಸ್ತಬ್ಧವಾಗಿದೆ. ಹೀಗಾಗಿ ಸರ್ಕಾರದ ವತಿಯಿಂದ ನಡೆಯುತ್ತಿದ್ದ ಗೌತಮ ಪಂಚ ರಥೋತ್ಸವ ರದ್ದಾಗಿದೆ.

English summary
Nanjanagudu Panchamaha rathotsava which was about to celebrate grandly today is cancelled due to corona. But it has celebrated in a simple way with the presence of five people,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X