ಮೈಸೂರಿನ ಈ ಹೋಟೆಲ್ನಲ್ಲಿ ಸಂಚಾರಿ ನಿಯಮದ ಪಾಠ!
ಮೈಸೂರು, ಸೆಪ್ಟೆಂಬರ್ 10: ಸಾಮಾನ್ಯವಾಗಿ ದಸರಾ ವೇಳೆ ವ್ಯಾಪಾರಿಗಳು ರಿಯಾಯಿತಿ ನೀಡಿ ಗ್ರಾಹಕರನ್ನು ಸೆಳೆಯುವ ಕಸರತ್ತು ಮಾಡುತ್ತಾರೆ. ಅದೇ ರೀತಿ ಇಲ್ಲಿನ ಹೋಟೆಲ್ ಮಾಲೀಕರೊಬ್ಬರು ಜನರಲ್ಲಿ ಸಂಚಾರ ನಿಯಮ ಪಾಲನೆಯ ಬಗ್ಗೆ ಅರಿವು ಮೂಡಿಸುವ ಮತ್ತು ನಿಯಮ ಪಾಲನೆ ಮಾಡುವವರನ್ನು ಪ್ರೋತ್ಸಾಹಿಸುವ ಸಲುವಾಗಿ ಶೇ.5ರಷ್ಟು ರಿಯಾಯಿತಿ ಘೋಷಿಸಿದ್ದಾರೆ.
ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಅಪೂರ್ವ ದರ್ಶಿನಿ ಹೋಟೆಲ್ ಮಾಲೀಕರಾದ ಅಪೂರ್ವ ಸುರೇಶ್ ಅವರು ದಸರಾ ಸಂದರ್ಭದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಹೋಟೆಲ್ಗೆ ಬರುವ ಗ್ರಾಹಕರಿಗೆ ಶೇ.5ರಷ್ಟು ರಿಯಾಯಿತಿಯನ್ನು ನೀಡುವ ಸಂಕಲ್ಪ ಮಾಡಿದ್ದಾರೆ. ಈಗಾಗಲೇ ನೂತನ ಸಂಚಾರಿ ನಿಯಮವನ್ನು ಪಾಲಿಸುವಂತೆ ಹೋಟೆಲ್ಗೆ ಬರುವ ಗ್ರಾಹಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ತಮ್ಮ ಹೋಟೆಲ್ ಆವರಣದಲ್ಲಿ ಎಲ್ಲರೂ ಸಂಚಾರಿ ನಿಯಮ ಪಾಲಿಸಬೇಕು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ನೂತನ ಪರಿಷ್ಕೃತ ದಂಡಗಳ ಮೊತ್ತದ ವಿವರವನ್ನು ಫಲಕಗಳಲ್ಲಿ ಬರೆದು ಅಂಟಿಸಿದ್ದಾರೆ. ಜೊತೆಗೆ ಗ್ರಾಹಕರಿಗೆ ನೀಡುವ ಬಿಲ್ ನಲ್ಲೂ ಗ್ರಾಹಕರೇ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ. ಸಂಚಾರ ನಿಯಮ ಪಾಲಿಸಿ ಎಂಬ ಘೋಷಣೆಗಳನ್ನು ಮುದ್ರಿಸಿ ಸಂಚಾರಿ ನಿಯಮ ಪಾಲನೆಯನ್ನು ಮಾಡುವಂತೆ ಪ್ರೋತ್ಸಾಹಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, "ನಾವು ಸಂಚಾರ ನಿಯಮ ಪಾಲಿಸಿದರೆ ದಂಡ ಪ್ರಮಾಣದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅದೆಷ್ಟೋ ಗ್ರಾಹಕರು ಹೆಲ್ಮೆಟ್ ಇಲ್ಲದೇ ವಾಹನ ಓಡಿಸಿಕೊಂಡು ಬರುತ್ತಾರೆ. ಮಾರ್ಗ ಮಧ್ಯೆ ಪೊಲೀಸರಿಗೆ ಸಿಕ್ಕಿ ಬಿದ್ದು, ಭಾರೀ ದಂಡ ಕಟ್ಟಿ ಇಲ್ಲಿಗೆ ಬಂದು ಪೇಚಾಡುತ್ತಾರೆ. ಹೆಲ್ಮೆಟ್ ಧರಿಸುವುದು ದಂಡದಿಂದ ಪಾರಾಗಲು ಮಾತ್ರವಲ್ಲ ಅದು ನಮ್ಮ ಜೀವ ರಕ್ಷಕ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಇದನ್ನು ಜನತೆಗೆ ತಿಳಿಸುವ ಸಣ್ಣ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಶಿಕ್ಷಕರು, ಪೊಲೀಸರು, ವಕೀಲರು ಮತ್ತು ವಿದ್ಯಾವಂತ ಜನರು ಮೊದಲು ಹೆಲ್ಮೆಟ್ ಬಳಸಲು ಪ್ರಾರಂಭಿಸಿದರೆ ಅವರನ್ನು ನೋಡಿ ಇತರರು ಪಾಲಿಸುತ್ತಾರೆ. ಅಮೂಲ್ಯ ಜೀವದ ಉಳಿವಿಗಾಗಿ ಪ್ರತಿಯೊಬ್ಬರೂ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸುವ ಮೂಲಕ ಶಿಸ್ತುಬದ್ಧ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸಬೇಕು" ಎಂದು ಮನವಿ ಮಾಡಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications