ಸಾಲಿಗ್ರಾಮ ಗ್ರಾ.ಪಂ ಅಧ್ಯಕ್ಷರಾಗಿ ಮಂಗಳಮುಖಿ ಆಯ್ಕೆ
ಮೈಸೂರು, ಫೆಬ್ರವರಿ 4: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗುವ ಮೂಲಕ ತೃತೀಯ ಲಿಂಗಿಗಳು ರಾಜಕೀಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವ ಅವಕಾಶವನ್ನು ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಸಾಲಿಗ್ರಾಮದ ಜನತೆ ಕಲ್ಪಿಸಿಕೊಟ್ಟಿದ್ದಾರೆ.
ದೇವಿಕಾ ಅವರೇ ಸಾಲಿಗ್ರಾಮ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದವರು. ಸಾಲಿಗ್ರಾಮದಲ್ಲಿ ಒಟ್ಟು 30 ಮಂದಿ ಗ್ರಾಮ ಪಂಚಾಯಿತಿ ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿದ್ದು, ಈ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಮಂಗಳಮುಖಿ ದೇವಿಕಾ ಮತ್ತು ಲಕ್ಷ್ಮಿ ಸೋಮಶೇಖರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಆದರೆ ಅಂತಿಮ ಕ್ಷಣದಲ್ಲಿ ಲಕ್ಷ್ಮಿ ಸೋಮಶೇಖರ್ ನಾಮಪತ್ರ ವಾಪಸ್ ಪಡೆದ ಕಾರಣ ಮಂಗಳಮುಖಿ ದೇವಿಕಾ ಒಬ್ಬರೆ ಕಣದಲ್ಲಿ ಉಳಿದ ಕಾರಣ, ಇವರು ಅವಿರೋಧವಾಗಿ ಆಯ್ಕೆಯಾದರು.

ಸಾಲಿಗ್ರಾಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿ ಮಹಿಳಾ ಮೀಸಲು ಕ್ಷೇತ್ರ ಸಾಲಿಗ್ರಾಮದ 7ನೇ ವಾರ್ಡ್ನಿಂದ ಕಣಕಿಳಿದಿದ್ದ ಮಂಗಳಮುಖಿ ದೇವಿಕಾ 5 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ನಂತರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲು ಪ್ರಕಟದಲ್ಲೂ ಸಾಲಿಗ್ರಾಮ ಗ್ರಾಮ ಪಂಚಾಯಿತಿ ಪರಿಶಿಷ್ಟ ಜಾತಿ ಮಹಿಳಾ ಮೀಸಲು ಅಧ್ಯಕ್ಷ ಸ್ಥಾನ ಲಭಿಸಿದ್ದು, ಇವರಿಗೆ ವರದಾನವಾಗಿತ್ತು. ಜತೆಗೆ ಪ್ರತಿಸ್ಪರ್ಧಿ ಲಕ್ಷ್ಮಿ ಸೋಮಶೇಖರ್ ಸಹಕಾರದಿಂದ ಅಧ್ಯಕ್ಷೆಯಾಗಿ ಆಯ್ಕೆಗೊಂಡು ಗೆಲುವಿನ ನಗೆ ಬೀರಿದರು.
ನಂತರ ಮಾತನಾಡಿದ ಅಧ್ಯಕ್ಷೆ ದೇವಿಕಾ ಅವರು, ಮಂಗಳಮುಖಿಯರನ್ನು ಕಂಡರೆ ಅಪಹಾಸ್ಯ ಮಾಡಿ ನಮ್ಮನ್ನು ಬೇರೆ ರೀತಿಯಲ್ಲಿಯೇ ಕಾಣುತ್ತಿದ್ದ ಈ ಸಮಾಜದಲ್ಲಿ ನನ್ನನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಿದ ಸಾಲಿಗ್ರಾಮ ಜನತೆಗೆ ಮತ್ತು ಜೆಡಿಎಸ್ ಪಕ್ಷದ ವರಿಷ್ಠರು ಹಾಗೂ ಶಾಸಕ ಸಾ.ರಾ.ಮಹೇಶ್ ಅಣ್ಣ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ನೂತನ ಅಧ್ಯಕ್ಷೆ ದೇವಿಕಾ ಅವರು ಮುಂದುವರೆದು, ಜನತೆಗೆ ಗ್ರಾ.ಪಂ ವತಿಯಿಂದ ಬರುವ ಎಲ್ಲ ಸವಲತ್ತುಗಳನ್ನು ಅವರ ಮನೆಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications