ಮೈಸೂರಿನ ಟ್ರಿಣ್ ಟ್ರಿಣ್ ಗೆ ಮತ್ತೊಂದು ಪ್ರಶಸ್ತಿಯ ಮುಕುಟ
ಮೈಸೂರು, ನವೆಂಬರ್ , 2 : ಸ್ವಚ್ಛ ನಗರಿ ಕೀರ್ತಿಗೆ 2 ಬಾರಿ ಪಾತ್ರವಾಗಿರುವ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಮೈಸೂರು ಮಹಾನಗರ ಪಾಲಿಕೆ ಕಿರೀಟಕ್ಕೆ ಈಗ ಮತ್ತೊಂದು ಪ್ರಶಸ್ತಿಯ ಗರಿ ಸೇರಿದೆ.
ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಬಳಕೆ (ಪಿಬಿಎಸ್) ಯೋಜನೆ 'ಟ್ರಿಣ್ ಟ್ರಿಣ್'ಗೆ ದೇಶದಲ್ಲೇ ಅತ್ಯುತ್ತಮ 'ಪಬ್ಲಿಕ್ ಬೈಸಿಕಲ್ ಶೇರಿಂಗ್' ವ್ಯವಸ್ಥೆ ಎಂಬ ವಿಶೇಷ ಪ್ರಶಸ್ತಿಗೆ ಪಾತ್ರವಾಗಿದೆ. ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಈ ಪ್ರಶಸ್ತಿ ಪ್ರಕಟಿಸಿದೆ. ಮೈಸೂರಿನ ಪಿಬಿಎಸ್ ಅತ್ಯುತ್ತಮ ಎನ್ಎಂಟಿ ಯೋಜನೆ ಎಂದು ಮನ್ನಣೆ ಗಳಿಸಿದೆ. ತೆಲಂಗಾಣದ ಹೈದರಾಬಾದ್ ನಲ್ಲಿನ ಅಂತಾರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ನ.6ರಂದು ನಡೆಯಲಿರುವ 10ನೇ 'ಭಾರತದಲ್ಲಿ ನಗರ ಚಲನಶೀಲತೆ' ಸಮಾವೇಶ ಮತ್ತು ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಎಂಆರ್ ಟಿಎಸ್ ಉಪ ಕಾರ್ಯದರ್ಶಿ ವಿ.ಎಸ್.ಪಾಂಡೆ ತಿಳಿಸಿದ್ದಾರೆ.
ಕೇಂದ್ರದ ನಗರ ರಸ್ತೆ ಸಾರಿಗೆ ಇಲಾಖೆ ಪರಿಸರ ಸ್ನೇಹಿ ಯೋಜನೆಯನ್ನು ಮೈಸೂರಿನಲ್ಲಿ ಮೊದಲ ಬಾರಿಗೆ ಆರಂಭಿಸಲು ಉತ್ಸಾಹ ತೋರಿದ್ದರಿಂದ ಮೈಸೂರು ಜಿಲ್ಲಾಡಳಿತ ಮತ್ತು ಪಾಲಿಕೆ ಜಂಟಿಯಾಗಿ ಟ್ರಿಣ್ ಟ್ರಿಣ್ ಯೋಜನೆ ರೂಪಿಸಿ ನಗರ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿವೆ.

ಮೈಸೂರು ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ ಮತ್ತು ತಪ್ಪಲು, ರೈಲ್ವೆ ನಿಲ್ದಾಣ, ನಗರ ಮತ್ತು ಗ್ರಾಮಾಂತರ ಬಸ್ ನಿಲ್ದಾಣ, ರಾಮಸ್ವಾಮಿ ವೃತ್ತ, ಆರ್ಟಿಓ ವೃತ್ತ, ಒಂಟಿಕೊಪ್ಪಲ್ ಆಕಾಶವಾಣಿ, ಸರಸ್ವತಿಪುರಂ ಅಗ್ನಿಶಾಮಕ ದಳ, ಬಲ್ಲಾಳ್ ವೃತ್ತ, ಮಿನಿ ವಿಧಾನಸೌಧ, ನಜರಬಾದ್ ಸೇರಿದಂತೆ ನಗರದ ಒಟ್ಟು 52 ಡಾಕಿಂಗ್ ಸೆಂಟರ್ ಗಳು ಸಾರ್ವಜನಿಕರ ಬಳಕೆಯಲ್ಲಿವೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications