ಹಿಮಾಲಯ ಪರ್ವತ ಏರಲಿದ್ದಾರೆ ಬಂಡೀಪುರ, ನಾಗರಹೊಳೆ ಬುಡಕಟ್ಟು ಬಾಲಕಿಯರು
ಮೈಸೂರು, ಏಪ್ರಿಲ್ 29:ಕಾನನದಲ್ಲಿ ಕಾಡುಪ್ರಾಣಿಗಳನ್ನೇ ಸ್ನೇಹಿತರನ್ನಾಗಿಸಿಕೊಂಡು ಬೆಳೆಯುವ ಮಕ್ಕಳಿಗೆ ಅದೇ ಪ್ರಪಂಚ ಎಂಬ ಭಾವ. ಆದರೆ ಅಂತಹ ವಿದ್ಯಾರ್ಥಿಗಳಿಗೆ ಹಿಮಾಲಯ ಏರುವ ಭಾಗ್ಯ ಒಲಿದು ಬಂದಿದೆ.
ಹೌದು, ಆಗಸವನ್ನು ಚುಂಬಿಸುವ ಹಿಮಾವೃತ ಪ್ರದೇಶಗಳ ಸೌಂದರ್ಯವನ್ನು ಆಸ್ವಾದಿಸುತ್ತಾ ಅಪಾಯವನ್ನು ಬೆನ್ನಿಗೆ ಕಟ್ಟಿಕೊಂಡು ಪರ್ವತ ಏರುವುದು ಸಾಹಸಮಯ ಮತ್ತು ರಮಣೀಯವಾದ ಅನುಭವ. ಕಾಡು - ಬೆಟ್ಟಗಳಲ್ಲಿ ಈಗಾಗಲೇ ತಮ್ಮ ಹೆಜ್ಜೆಗುರುತು ಮೂಡಿಸಿರುವ ಬಂಡೀಪುರ ಮತ್ತು ನಾಗರಹೊಳೆ ಬುಡಕಟ್ಟು ಬಾಲಕಿಯರು ಹಿಮಾಲಯದ ಪರ್ವತಗಳಲ್ಲಿಯೂ ತಮ್ಮ ಹೆಜ್ಜೆ ಗುರುತನ್ನು ದಾಖಲಿಸಲು ಸಜ್ಜಾಗಿದ್ದಾರೆ.
ಈ ಸಾಹಸಕ್ಕೆ ಮೈಸೂರಿನ ಟೈಗರ್ ಅಡ್ವೆಂಚರ್ ಫೌಂಡೇಶನ್ ಒತ್ತಾಸೆಯಾಗಿದೆ. ವಿಶ್ವ ಪರ್ವತಾರೋಹಿ ದಿನದ ಪ್ರಯುಕ್ತ ಟೈಗರ್ ಅಡ್ವೆಂಚರ್ ಫೌಂಡೇಶನ್ ಆಶಾ-2019 ಎಂಬ ಕಾರ್ಯಕ್ರಮದಡಿ ಬಂಡೀಪುರ ಮತ್ತು ನಾಗರಹೊಳೆ ವ್ಯಾಪ್ತಿಯಿಂದ 12 ಮಂದಿ ಬುಡಕಟ್ಟು ಬಾಲಕಿಯರು 14 ಸಾವಿರ ಅಡಿ ಎತ್ತರದ ಹಿಮಾಲಯ ಏರಲು ಸಿದ್ಧರಾಗಿದ್ದಾರೆ.

ಸಾಹಸಮಯ ಪ್ರವೃತ್ತಿಯ ಚಾರಣ ಆತ್ಮಸ್ಥೈರ್ಯ ವೃದ್ಧಿಸುವ ಸಾಧನೆ ಎಂದು ನಂಬಿರುವ ಟೈಗರ್ ಅಡ್ವೆಂಚರ್ ಫೌಂಡೇಶನ್ ಈ ವರ್ಷ ಬುಡಕಟ್ಟು ಬಾಲಕಿಯರನ್ನು ಹಿಮಾಲಯಕ್ಕೆ ಕರೆದುಕೊಂಡು ಹೋಗುತ್ತಿದೆ.
ಇವರ ಕಾರ್ಯಕ್ಕೆ 139 ಮಂದಿ 8.5 ಲಕ್ಷ ರೂ ಧನಸಹಾಯ ನೀಡಿ ಮಕ್ಕಳ ಚಾರಣಕ್ಕೆ ನೆರವಾಗಿದ್ದಾರೆ. ಮೇ 2 ರಿಂದ 17 ರವರೆಗೆ ಹಿಮಾಲಯದ 14 ಸಾವಿರ ಅಡಿ ಎತ್ತರಕ್ಕೆ ಚಾರಣ ಕೈಗೊಳ್ಳಲಾಗಿದೆ. ಚಾರಣದ ಹಿನ್ನೆಲೆಯಲ್ಲಿ ಕಬಿನಿ ಹಿನ್ನೀರಿನಲ್ಲಿ ಮೂರು ತಿಂಗಳಿಂದ ಸತತವಾಗಿ ದೈಹಿಕ ಸಾಮರ್ಥ್ಯ ವೃದ್ಧಿಸುವ ತರಬೇತಿ ನೀಡಲಾಗಿದೆ.

ಮೈಸೂರು ಕುಕ್ಕರಹಳ್ಳಿ ಕೆರೆ, ಚಾಮುಂಡಿ ಬೆಟ್ಟದಲ್ಲಿಯೂ ಕಠಿಣ ತರಬೇತಿ ನೀಡಲಾಗಿದೆ. 8 ಬಾರಿ ಹಿಮಾಲಯ ಚಾರಣ ಮಾಡಿರುವ ಒಂಬತ್ತನೇ ತರಗತಿ ವಿದ್ಯಾರ್ಥಿನಿ ರಿಯಾ ಸೋಲಂಕಿ ಈ ತಂಡವನ್ನು ಮುನ್ನಡೆಸಲಿದ್ದಾರೆ. ಬುಡಕಟ್ಟು ಮಕ್ಕಳೆಂದರೆ ಅವರೇನ್ರೀ ಸಾಧನೆ ಮಾಡ್ತಾರೆ ಎಂದು ಹೀಗಳೆಯುವ ಜನರಿಗೆ ಈ ದಿಟ್ಟ ಹೆಣ್ಣು ಮಕ್ಕಳ ಸಾಧನೆ ಮಾದರಿಯಾಗಲಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications