ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಯುವರಾಜನಿಗೆ ಆದ್ಯವೀರ್ ಎಂದು ನಾಮಕರಣ

By Yashaswini
|
Google Oneindia Kannada News

ಮೈಸೂರು, ಫೆಬ್ರವರಿ 25 : ಯದುವಂಶದ ಕುಡಿಗೆ ಇಂದು ನಾಮಕರಣ ಶಾಸ್ತ್ರ ನಡೆಯಿತು. ಮಗುವಿಗೆ ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದವರು ಮಗುವಿಗೆ ಆರ್ಶೀರ್ವಾದ ಮಾಡಿದರು.

ಬೆಂಗಳೂರಿನ ಅರಮನೆಯಲ್ಲಿ ಭಾನುವಾರ ನಾಮಕರಣ ಕಾರ್ಯಕ್ರಮ ನಡೆಯಿತು. ಬಂಧುಗಳು ಮತ್ತು ಆತ್ಮೀಯರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಬೆಂಗಳೂರಿನ ಅರಮನೆಗೆ ಶನಿವಾರ ರಾತ್ರಿಯೇ ಆಗಮಿಸಿದ್ದರು.

ಮೈಸೂರಿಗೆ ಬಂದ ಮುದ್ದು ರಾಜಕುಮಾರ: ಒಂದಷ್ಟು ಚಿತ್ರಗಳುಮೈಸೂರಿಗೆ ಬಂದ ಮುದ್ದು ರಾಜಕುಮಾರ: ಒಂದಷ್ಟು ಚಿತ್ರಗಳು

ಕಳೆದ ಡಿಸೆಂಬರ್‌ನಲ್ಲಿ ಮಹಾರಾಜ ಯದುವೀರ್ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದರು.

Trishika and Yaduveer baby naming ceremony in Bengaluru

ನಾಮಕರಣಕ್ಕೆ ಹಲವು ದಿನಗಳು ನಿಗದಿಯಾಗಿದ್ದರೂ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಮೈಸೂರು ಯದುವಂಶಕ್ಕೆ 1953ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಜನನವಾದ ನಂತರ ಇಲ್ಲಿಯವರೆಗೆ ಯಾವುದೇ ಗಂಡು ಮಕ್ಕಳು ಜನಿಸಿರಲಿಲ್ಲ.

ಅಜ್ಜಿ, ರಾಜಮಾತೆ ಮಡಿಲಲ್ಲಿ ಪವಡಿಸುತ್ತಿರುವ ಮುದ್ದು ರಾಜಕುಮಾರಅಜ್ಜಿ, ರಾಜಮಾತೆ ಮಡಿಲಲ್ಲಿ ಪವಡಿಸುತ್ತಿರುವ ಮುದ್ದು ರಾಜಕುಮಾರ

ಈ ಹಿನ್ನೆಲೆಯಲ್ಲಿ ಯದುವೀರ್ ಅವರನ್ನು 2013ರಲ್ಲಿ ಸಂಬಂಧಿಕರಲ್ಲೇ ದತ್ತು ತೆಗೆದುಕೊಳ್ಳಲಾಗಿತ್ತು. 2016 ಜೂನ್ 27ರಂದು ತ್ರಿಷಿಕಾ ಕುಮಾರಿ ಜೊತೆ ಮದುವೆ ಮಾಡಿಕೊಡಲಾಗಿತ್ತು.

English summary
Trishika and Yaduveer Wadiyar couple son naming ceremony held at Bengaluru on February 25, 2018. Baby named as Adya Veer Narasimha Raja Wadeyar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X