ಮೈಸೂರು ವಿವಿ ಪ್ರಾಧ್ಯಾಪಕನ ಅತ್ಯಾಚಾರ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್
ಮೈಸೂರು, ಆಗಸ್ಟ್ 06: ಮೈಸೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕನಿಂದಲೇ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ.
ಪ್ರಾಧ್ಯಾಪಕನಿಂದ ಅತ್ಯಾಚಾರವಾಗಿದೆ ಎಂದು ದೂರು ನೀಡಿದ್ದ ಪಿಎಚ್ಡಿ ವಿದ್ಯಾರ್ಥಿನಿ ಈಗ ಉಲ್ಟಾ ಹೊಡೆದಿದ್ದಾಳೆ. ನನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಗುರುವಾರ ಸಂತ್ರಸ್ತೆ ಪೊಲೀಸ್ ದೂರು ಕೊಟ್ಟಿದ್ದರು.
ಅತ್ಯಾಚಾರ ಸಂತ್ರಸ್ತೆ ದೂರಿನ ಪ್ರತಿಗೆ ಸಹಿ ಹಾಗೂ ಹೆಬ್ಬೆಟ್ಟು ಹಾಕಿದ್ದಳು. ಆದರೆ, ಪೊಲೀಸರ ವಿಚಾರಣೆ ವೇಳೆ ಉಲ್ಟಾ ಹೊಡೆದಿದ್ದು, "ನನ್ನ ಮೇಲೆ ಅತ್ಯಾಚಾರ ಆಗಿಲ್ಲ, ಅಂತಹ ಯಾವ ಘಟನೆಯೂ ನಡೆದಿಲ್ಲ," ಎಂದು ಹೇಳಿದ್ದಾಳೆ.

"ಪ್ರೊ.ರಾಮಚಂದ್ರ ನನ್ನ ಪಿಎಚ್ಡಿ ಮಾರ್ಗದರ್ಶಕರಾಗಿದ್ದು, ಸಂಶೋಧನೆ ಬಗ್ಗೆ ನಾವಿಬ್ಬರೂ ಮಾತನಾಡುತ್ತಿದ್ದೆವು. ಆಗ ಮನೆಗೆ ಬಂದ ರಾಮಚಂದ್ರ ಪತ್ನಿ ಲೋಲಾಕ್ಷಿ ರಂಪ ಮಾಡಿದರು. ನನ್ನನ್ನು ಹೆದರಿಸಿ, ಬೆದರಿಸಿ ಬಲವಂತವಾಗಿ ದೂರು ಬರೆಸಿಕೊಂಡರು,'' ಎಂದು ಲೋಲಾಕ್ಷಿ ವಿರುದ್ಧವೇ ಪಿಎಚ್ಡಿ ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಬಗ್ಗೆ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಏನಿದು ಘಟನೆ?
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಬಯಲಾಗಿದ್ದು, ಪ್ರಾಧ್ಯಾಪಕನಿಂದಲೇ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಪತ್ನಿ ಎದುರು ಪ್ರಾಧ್ಯಾಪಕ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು ಎನ್ನಲಾಗಿತ್ತು.
ಮೈಸೂರು ವಿವಿ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ. ರಾಮಚಂದ್ರ ವಿರುದ್ಧ ಆರೋಪ ಕೇಳಿಬಂದಿದ್ದು, ಅತ್ಯಾಚಾರ ಸಂತ್ರಸ್ತೆಯಿಂದ ಗುರುವಾರ ಮೈಸೂರಿನ ಜಯಲಕ್ಷ್ಮಿ ಪುರಂ ಠಾಣೆಗೆ ದೂರು ನೀಡಿದ್ದಳು.

ಸಂತ್ರಸ್ತೆ ಪ್ರೋ. ರಾಮಚಂದ್ರ ಬಳಿ ಪಿಎಚ್ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ವಿದ್ಯಾರ್ಥಿನಿಯನ್ನು ಮನೆಗೆ ರಾಮಚಂದ್ರ ಕರೆಸಿಕೊಂಡಿದ್ದರು ಎನ್ನಲಾಗಿದೆ.
ಈ ವೇಳೆ ಕೂಗಾಟ, ಚೀರಾಟ ನಡೆಸಿದ್ದ ವಿದ್ಯಾರ್ಥಿನಿಯು, ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಮನೆಗೆ ಬಂದಿದ್ದಾರೆ. ಪ್ರೋ. ರಾಮಚಂದ್ರ ಪತ್ನಿ ಲೋಲಾಕ್ಷಿ ಕೂಡ ಮೈಸೂರು ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ ಎನ್ನಲಾಗಿದೆ.
ಪತ್ನಿ ಲೋಲಾಕ್ಷಿಯು ಸಂತ್ರಸ್ತೆ ಯುವತಿಯನ್ನು ಹಾಗೂ ಪತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದರು. ನಂತರ ಆರೋಪಿ ಪ್ರೋ. ರಾಮಚಂದ್ರರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
"ನನ್ನ ಪತಿ ಹಲವು ವಿದ್ಯಾರ್ಥಿನಿಯರನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ," ಎಂದು ರಾಮಚಂದ್ರರ ಪತ್ನಿ ಹಾಗೂ ಮೈಸೂರು ವಿವಿ ಪ್ರಾಧ್ಯಾಪಕಿಯೂ ಆಗಿರುವ ಲೋಲಾಕ್ಷಿ ಆರೋಪಿಸಿದ್ದಾರೆ.
"ನಾನು ಗುರುವಾರ ಕಾಲೇಜಿಗೆ ಹೋಗಿದ್ದೆ, ಸ್ಟಡಿ ಮೆಟಿರಿಯಲ್ ತೆಗೆದುಕೊಳ್ಳುವ ಸಲುವಾಗಿ ಮನೆಗೆ ಬಂದೆ. ಆಗ ಮನೆಯಲ್ಲಿ ಕೂಗಾಟ ಕೇಳಿಸುತ್ತಿತ್ತು. ಬಾಗಿಲು ತೆಗೆಸಿದಾಗ ಸಂತ್ರಸ್ತೆಯು ನನ್ನ ಕಾಲು ಹಿಡಿದುಕೊಂಡಳು. ನನ್ನ ಮೇಲೆ ಅತ್ಯಾಚಾರವಾಗಿದೆ ಅಂತಾ ಹೇಳಿಕೊಂಡಳು. ಕೂಡಲೇ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದೇನೆ,'' ಎಂದು ಲೋಲಾಕ್ಷಿ ಹೇಳಿದ್ದಾರೆ.
"ನನ್ನ ಗಂಡ ಡಿಪಾರ್ಟ್ಮೆಂಟ್ನಲ್ಲೇ ವಿದ್ಯಾರ್ಥಿನಿಯರ ಜೊತೆ ಸಂಬಂಧ ಇಟ್ಟುಕೊಂಡಿದ್ದ. ಅವರಿಂದ ಪಿಎಚ್ಡಿ ಮಾರ್ಗದರ್ಶನ ಪಡೆಯುವ ಕೆಲ ಪುರುಷ ವಿದ್ಯಾರ್ಥಿಗಳು ನನ್ನ ಗಂಡನಿಗೆ ಯುವತಿಯರನ್ನು ಪೂರೈಕೆ ಮಾಡುತ್ತಿದ್ದರು. ಇದೆಲ್ಲದರ ಬಗ್ಗೆ ಮೊದಲಿನಿಂದಲೂ ನನಗೆ ಅನುಮಾನವಿತ್ತು. ಇವತ್ತು ಅದು ಸಾಬೀತಾಗಿದೆ,'' ಎಂದು ತಿಳಿಸಿದ್ದಾರೆ.

"ಬೇರೆ ಯಾವ ಯುವತಿಯರ ಮೇಲೂ ಇಂತಹ ದಾಳಿ ನಡೆಯಬಾರದು. ಹೀಗಾಗಿ ನಾನೇ ಮುಂದೆ ನಿಂತು ದೂರು ದಾಖಲಿಸಿದ್ದೇನೆ. ಮೈಸೂರು ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ಗಮನಕ್ಕೂ ಈ ವಿಚಾರ ತಂದಿದ್ದೇನೆ,'' ಎಂದರು.
"ಯುಗಾದಿ ಹಬ್ಬದಂದು ಮನೆಯಲ್ಲಿ ದೊಡ್ಡ ಗಲಾಟೆಯಾಗಿತ್ತು. ನನ್ನನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಈ ಬಗ್ಗೆ ಹೊರಗಡೆ ಇವರ ಬಗ್ಗೆ ವಿಚಾರಿಸಿದಾಗ, ಬೇರೆ ಬೇರೆ ಯುವತಿಯರ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ನಾನು ಅವರನ್ನು ಗಮನಿಸುತ್ತಿದ್ದೆ. ಲಾಕ್ಡೌನ್ ವೇಳೆ ಮನೆಯಲ್ಲಿದ್ದರು. ನಂತರ ಕೆಲವು ದಿನ ಲಾಡ್ಜ್ನಲ್ಲಿ ಉಳಿದುಕೊಳ್ಳುತ್ತಿದ್ದರು,'' ಎಂದು ಪ್ರೋ. ರಾಮಚಂದ್ರ ಪತ್ನಿ ಲೋಲಾಕ್ಷಿ ಆರೋಪಿಸಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications