ಗೂಬೆ ಮಾರಾಟದಿಂದ ಲಕ್ಷಾಧಿಪತಿಯಾಗಲು ಹೊರಟರು; ಮುಂದೇನಾಯ್ತು?
ಮೈಸೂರು, ನವೆಂಬರ್ 23: ಕಾಡಿನಲ್ಲಿ ಸಿಗುವ ಗೂಬೆಗಳನ್ನು ಹಿಡಿದು ಮಾರಾಟ ಮಾಡುವ ಮೂಲಕ ಯುವಕರಿಬ್ಬರು ಲಕ್ಷಾಧಿಪತಿಯಾಗಲು ಹೊರಟು ಈಗ ಅರಣ್ಯಾಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾರೆ.
ಆರೋಪಿಗಳು ನಾಗಮಂಗಲದ ಮೀಸಲು ಅರಣ್ಯದಲ್ಲಿ ಎರಡು ಗೂಬೆಗಳನ್ನು ಸೆರೆ ಹಿಡಿದು ಶುಕ್ರವಾರ ಸಂಜೆ ಮೈಸೂರಿನ ಉದ್ಯಮಿಗಳಿಗೆ, ಶ್ರೀಮಂತರಿಗೆ ತಲಾ ಐದು ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಈ ಗೂಬೆಗಳನ್ನು ಮನೆಯಲ್ಲಿಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತದೆ, ಹೀಗೆ ಇಟ್ಟುಕೊಂಡವರು ಕೋಟ್ಯಧಿಪತಿಗಳಾಗಿದ್ದಾರೆ ಎಂದು ಇವರು ಕಥೆ ಕಟ್ಟುತ್ತಿದ್ದರು.

ಈ ಯುವಕರು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಾಹಿತಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ಮಿಂಚಿನ ದಾಳಿ ನಡೆಸಿದ ಮೈಸೂರಿನ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಮತ್ತು ತಂಡದ ಬಲೆಗೆ ಬಿದ್ದಿದ್ದಾರೆ. ಗೂಬೆಗಳ ಮಾರಾಟಕ್ಕೆ ಯತ್ನಿಸುತಿದ್ದ ವ್ಯಕ್ತಿ ನಾಗಮಂಗಲ ತಾಲೂಕಿನ ಶಿಖರಿಪುರ ಗ್ರಾಮದ ಧವನಿಕುಮಾರ್ ಆಗಿದ್ದು, ಈತನ ಸಹ ಆರೋಪಿ ಪರಾರಿಯಾಗಿದ್ದಾನೆ. ಮೊಕದ್ದಮೆ ದಾಖಲು ಮಾಡಿಕೊಂಡಿರುವ ಅರಣ್ಯಾಧಿಕಾರಿಗಳು ಬಂಧಿತನನ್ನು ನಾಗಮಂಗಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications