ಮೈಸೂರಿನಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಮೈಸೂರು, ಜನವರಿ 4: ಮೈಸೂರು-ಬೆಂಗಳೂರು ಮಾರ್ಗದ ಬೆಳವಾಡಿ ಬಳಿ ಅಪರಿಚಿತ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಯುವಕನ ವಯಸ್ಸು ಸುಮಾರು 25 ರಿಂದ 30 ಎಂದು ಅಂದಾಜಿಸಲಾಗಿದೆ. ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ಕಾರಣ ತಲೆ ಛಿದ್ರವಾಗಿದೆ. ಈತನ ಕುರಿತು ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈತನ ಎತ್ತರ 5.6 ಇದ್ದು, ಬ್ಲಾಕ್ ಟ್ರ್ಯಾಕ್ ಪ್ಯಾಂಟ್ ಮತ್ತು ಬಿಳಿಯ ಬಣ್ಣದ ಟೀ ಶರ್ಟ್ ಧರಿಸಿದ್ದಾನೆ. ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವಾರಸುದಾರರಿದ್ದಲ್ಲಿ ಮೈಸೂರು ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದು.[ಪ್ರೀತಿಸಿದ ಯುವತಿಯನ್ನು ಕೊಂದು, ಯುವಕ ಆತ್ಮಹತ್ಯೆ]

ಸಿವಿಲ್ ಕಂಟ್ರಾಕ್ಟರ್ ಸಾವು
ಮೈಸೂರು: ಸಿವಿಲ್ ಕಂಟ್ರಾಕ್ಟರ್ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋಬ್ಬರು ತನ್ನ ರೂಮಿನಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.[ಕೆಆರ್ ಪೇಟೆ ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತನ ಕೊಲೆ]
ಬೆಂಗಳೂರು ಮೂಲದ ಶಿವಕುಮಾರ್(45) ಎಂಬವರೇ ಸಾವಿಗೀಡಾದ ವ್ಯಕ್ತಿ. ಮೈಸೂರಿನ ವಿದ್ಯಾವರ್ಧಕ ಬಳಿ ಬಾಡಿಗೆ ರೂಮಿನಲ್ಲಿ ವಾಸವಿದ್ದ ಇವರು ತನ್ನ ಮನೆಯವರಿಗೆ ಜನವರಿ 1 ರಂದು ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದ್ದರು. ಜನವರಿ 2 ರಂದು ಇವರಿಂದ ಯಾವುದೇ ಕರೆಯೂ ಬಂದಿರಲಿಲ್ಲ. ಮನೆಯಿಂದ ಬಂದಿರುವ ಕರೆಯನ್ನೂ ಇವರು ಸ್ವೀಕರಿಸದ ಕಾರಣ ಅನುಮಾನಗೊಂಡು ಇವರು ವಾಸಿಸುತ್ತಿದ್ದ ರೂಮಿನ ಬಳಿ ಧಾವಿಸಿ ಬಂದು ನೋಡಿದಾಗ ಕೈಯ್ಯಲ್ಲಿ ಸಿಗರೇಟ್ ಹಿಡಿದ ಸ್ಥಿತಿಯಲ್ಲಿಯೇ ಇವರು ಸಾವನ್ನಪ್ಪಿದ್ದಾರೆ.
ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications