ಮೈಸೂರು ಜಿಲ್ಲೆಗೆ ಎರಡು ಅಬಕಾರಿ ಜಿಲ್ಲಾಧಿಕಾರಿಗಳ ಹುದ್ದೆ ಸೃಷ್ಟಿ
ಮೈಸೂರು, ಮೇ 09 ; ರಾಜ್ಯ ಸರ್ಕಾರ ಅಬಕಾರಿ ಇಲಾಖೆಯನ್ನು ಪುನರ್ವಿಂಗಡಣೆ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಬೆಂಗಳೂರು ನಗರ ಜಿಲ್ಲೆಯ ವಿಭಾಗೀಯ ಕಚೇರಿ, ಮೈಸೂರು ಹಾಗೂ ಬೆಳಗಾವಿ ಜಿಲ್ಲಾ ಕಚೇರಿಗಳನ್ನು ಮರುವಿನ್ಯಾಸಗೊಳಿಸಿ ಉನ್ನತೀಕರಿಸಲಾಗಿದೆ.
ಈ ಕಾರಣಕ್ಕಾಗಿ ಇಲ್ಲಿ ಹುದ್ದೆಗಳನ್ನೂ ಹೆಚ್ಚು ಮಾಡಲಾಗಿದೆ. ಮೈಸೂರು ಜಿಲ್ಲೆಗೆ ಕೇರಳ ರಾಜ್ಯದ ಗಡಿಭಾಗಗಳು ಹೊಂದಿಕೊಂಡಿವೆ. ಮೈಸೂರು ಜಿಲ್ಲೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಸಮಪರ್ಕವಾಗಿ ನಿರ್ವಹಿಸಲು ಮೈಸೂರು ತಾಲ್ಲೂಕನ್ನು ಮೈಸೂರು ನಗರ ಜಿಲ್ಲೆ ಎಂದು ವಿಂಗಡಿಸಲಾಗಿದೆ. ಮೈಸೂರು ತಾಲ್ಲೂಕನ್ನು ಹೊರತುಪಡಿಸಿ, ಉಳಿದ ಮೂರು ತಾಲ್ಲೂಕುಗಳನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಎಂದು ಮರು ನವೀಕರಿಸಲಾಗಿದೆ.

ಕರ್ನಾಟಕದಲ್ಲಿ ಬಾರ್, ಕ್ಲಬ್ನಲ್ಲಿ ಇನ್ಮುಂದೆ ಸಿಗುತ್ತೆ ಎಣ್ಣೆ
ಈ ಹಿಂದೆ ಮೈಸೂರು ಜಿಲ್ಲೆಗೆ ಮಂಜೂರಾಗಿರುವ ಅಬಕಾರಿ ಉಪ ಆಯುಕ್ತರ ಹುದ್ದೆಯನ್ನು ಅಬಕಾರಿ ಉಪ ಆಯುಕ್ತರು, ಮೈಸೂರು ನಗರ ಜಿಲ್ಲೆ ಎಂದು ಪುನರ್ ಪದನಾಮಕರಣ ಮಾಡಲಾಗಿದೆ. ಹೊಸದಾಗಿ ಸೃಷ್ಟಿ ಮಾಡಲಾದ ಮೈಸೂರು ಗ್ರಾಮಾಂತರ ಜಿಲ್ಲೆಗೆ ಅಬಕಾರಿ ಉಪ ಆಯುಕ್ತರ ಕಚೇರಿಯನ್ನು ಸೃಷ್ಟಿಸಲಾಗಿದೆ. ಈ ಎರಡೂ ಕಚೇರಿಗಳನ್ನು ಮೈಸೂರನ್ನೇ ಕೇಂದ್ರ ಸ್ಥಾನವನ್ನಾಗಿಸಲು ಕೂಡ ಸರ್ಕಾರ ಆದೇಶ ಮಾಡಿದೆ.
ಪ್ರಸ್ತುತ ಮೈಸೂರು ಜಿಲ್ಲೆಯಲ್ಲಿ ಮೈಸೂರು ಉಪ ವಿಭಾಗ ಹಾಗೂ ಹುಣಸೂರು ಉಪ ವಿಭಾಗವೆಂದು ಎರಡು ಉಪ ವಿಭಾಗಗಳಿವೆ. ಹಾಲಿ ಇರುವ ಮೈಸೂರು ಉಪ ವಿಭಾಗವನ್ನು ಮೈಸೂರು ನಗರ ಜಿಲ್ಲೆಗೆ ನಿಗದಿ ಮಾಡಲಾಗಿದೆ. ಹೊಸದಾಗಿ ಸೃಷ್ಟಿಯಾಗಿರುವ ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಹುಣಸೂರು ಉಪವಿಭಾಗದ ಜೊತೆಗೆ ಹೊಸದಾಗಿ ನಂಜನಗೂಡು ಉಪ ವಿಭಾಗವನ್ನು ಸೃಷ್ಟಿ ಮಾಡಲಾಗಿದೆ. ಇನ್ನು ಮುಂದಕ್ಕೆ ಮೈಸೂರು ನಗರ ಹಾಗೂ ಗ್ರಾಮಾಂತರ ಎಂಬ ಎರಡು ಅಬಕಾರಿ ಜಿಲ್ಲಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications