ಮೈಸೂರು ಜಿಲ್ಲೆಗೆ ಎರಡು ಅಬಕಾರಿ ಜಿಲ್ಲಾಧಿಕಾರಿಗಳ ಹುದ್ದೆ ಸೃಷ್ಟಿ
ಮೈಸೂರು, ಮೇ 09 ; ರಾಜ್ಯ ಸರ್ಕಾರ ಅಬಕಾರಿ ಇಲಾಖೆಯನ್ನು ಪುನರ್ವಿಂಗಡಣೆ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಬೆಂಗಳೂರು ನಗರ ಜಿಲ್ಲೆಯ ವಿಭಾಗೀಯ ಕಚೇರಿ, ಮೈಸೂರು ಹಾಗೂ ಬೆಳಗಾವಿ ಜಿಲ್ಲಾ ಕಚೇರಿಗಳನ್ನು ಮರುವಿನ್ಯಾಸಗೊಳಿಸಿ ಉನ್ನತೀಕರಿಸಲಾಗಿದೆ.
ಈ ಕಾರಣಕ್ಕಾಗಿ ಇಲ್ಲಿ ಹುದ್ದೆಗಳನ್ನೂ ಹೆಚ್ಚು ಮಾಡಲಾಗಿದೆ. ಮೈಸೂರು ಜಿಲ್ಲೆಗೆ ಕೇರಳ ರಾಜ್ಯದ ಗಡಿಭಾಗಗಳು ಹೊಂದಿಕೊಂಡಿವೆ. ಮೈಸೂರು ಜಿಲ್ಲೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಸಮಪರ್ಕವಾಗಿ ನಿರ್ವಹಿಸಲು ಮೈಸೂರು ತಾಲ್ಲೂಕನ್ನು ಮೈಸೂರು ನಗರ ಜಿಲ್ಲೆ ಎಂದು ವಿಂಗಡಿಸಲಾಗಿದೆ. ಮೈಸೂರು ತಾಲ್ಲೂಕನ್ನು ಹೊರತುಪಡಿಸಿ, ಉಳಿದ ಮೂರು ತಾಲ್ಲೂಕುಗಳನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಎಂದು ಮರು ನವೀಕರಿಸಲಾಗಿದೆ.

ಕರ್ನಾಟಕದಲ್ಲಿ ಬಾರ್, ಕ್ಲಬ್ನಲ್ಲಿ ಇನ್ಮುಂದೆ ಸಿಗುತ್ತೆ ಎಣ್ಣೆ
ಈ ಹಿಂದೆ ಮೈಸೂರು ಜಿಲ್ಲೆಗೆ ಮಂಜೂರಾಗಿರುವ ಅಬಕಾರಿ ಉಪ ಆಯುಕ್ತರ ಹುದ್ದೆಯನ್ನು ಅಬಕಾರಿ ಉಪ ಆಯುಕ್ತರು, ಮೈಸೂರು ನಗರ ಜಿಲ್ಲೆ ಎಂದು ಪುನರ್ ಪದನಾಮಕರಣ ಮಾಡಲಾಗಿದೆ. ಹೊಸದಾಗಿ ಸೃಷ್ಟಿ ಮಾಡಲಾದ ಮೈಸೂರು ಗ್ರಾಮಾಂತರ ಜಿಲ್ಲೆಗೆ ಅಬಕಾರಿ ಉಪ ಆಯುಕ್ತರ ಕಚೇರಿಯನ್ನು ಸೃಷ್ಟಿಸಲಾಗಿದೆ. ಈ ಎರಡೂ ಕಚೇರಿಗಳನ್ನು ಮೈಸೂರನ್ನೇ ಕೇಂದ್ರ ಸ್ಥಾನವನ್ನಾಗಿಸಲು ಕೂಡ ಸರ್ಕಾರ ಆದೇಶ ಮಾಡಿದೆ.
ಪ್ರಸ್ತುತ ಮೈಸೂರು ಜಿಲ್ಲೆಯಲ್ಲಿ ಮೈಸೂರು ಉಪ ವಿಭಾಗ ಹಾಗೂ ಹುಣಸೂರು ಉಪ ವಿಭಾಗವೆಂದು ಎರಡು ಉಪ ವಿಭಾಗಗಳಿವೆ. ಹಾಲಿ ಇರುವ ಮೈಸೂರು ಉಪ ವಿಭಾಗವನ್ನು ಮೈಸೂರು ನಗರ ಜಿಲ್ಲೆಗೆ ನಿಗದಿ ಮಾಡಲಾಗಿದೆ. ಹೊಸದಾಗಿ ಸೃಷ್ಟಿಯಾಗಿರುವ ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಹುಣಸೂರು ಉಪವಿಭಾಗದ ಜೊತೆಗೆ ಹೊಸದಾಗಿ ನಂಜನಗೂಡು ಉಪ ವಿಭಾಗವನ್ನು ಸೃಷ್ಟಿ ಮಾಡಲಾಗಿದೆ. ಇನ್ನು ಮುಂದಕ್ಕೆ ಮೈಸೂರು ನಗರ ಹಾಗೂ ಗ್ರಾಮಾಂತರ ಎಂಬ ಎರಡು ಅಬಕಾರಿ ಜಿಲ್ಲಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications