ದಸರೆಗೂ ಮುನ್ನ ಪ್ರಮೋದಾದೇವಿ ಒಡೆಯರ್ ಭೇಟಿ ಮಾಡಿದ ಮೈಸೂರಿನ ಉಭಯ ಸಚಿವರು
Recommended Video

ಮೈಸೂರು, ಸೆಪ್ಟೆಂಬರ್. 27: ಅಕ್ಟೋಬರ್ 10 ರಿಂದ 19ರವರೆಗೆ ನಡೆಯಲಿರುವ ವೈಭವೋಪೇತ ದಸರಾಗೆ ಪೂರ್ವಭಾವಿಯಾಗಿ ಬುಧವಾರ ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ದಸರಾ ಕುರಿತು ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವ ಜಿಟಿ ದೇವೇಗೌಡ, ಇದು ಸೌಜನ್ಯದ ಭೇಟಿ. ದಸರಾ ಮಹೋತ್ಸವಕ್ಕೆ ಕಾರ್ಯಕಾರಿ ಸಮಿತಿಯ ವತಿಯಿಂದ ಮತ್ತೊಂದು ದಿನ ಬಂದು ಅಧಿಕೃತವಾಗಿ ಆಹ್ವಾನ ನೀಡುತ್ತೇವೆ ಎಂದರು.
ಸಚಿವರಾದ ಸಾ.ರಾ. ಮಹೇಶ್ ಮಾತನಾಡಿ, ರಾಜ್ಯಕ್ಕೆ ಮೈಸೂರು ರಾಜಮನೆತನದ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪ್ರವಾಸೋದ್ಯಮ ರಾಯಭಾರಿಯಾಗುವಂತೆ ಮನವಿ ಮಾಡಿದ್ದೆವು. ಅವರು ಒಪ್ಪಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.

ಸೆಪ್ಟೆಂಬರ್ 27 ರಂದು ಎಲ್ಲಾ ಜಿಲ್ಲೆಗಳಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವುದು ಎಂದು ತಿಳಿಸಿದರು. ಉಭಯ ಸಚಿವರಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸಾಥ್ ನೀಡಿದರು.












Click it and Unblock the Notifications