ಮಂಟಿಬಿಳಗುಲಿಯಲ್ಲಿ ಸ್ನಾನಕ್ಕೆಂದು ಕೆರೆಗಿಳಿದ ಯುವಕರು ಶವವಾದರು
ಪಿರಿಯಾಪಟ್ಟಣ, ಅಕ್ಟೋಬರ್.18: ಕೆರೆಯಲ್ಲಿ ಸ್ನಾನ ಮಾಡಲು ಹೋದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಮಂಟಿಬಿಳಗುಲಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬುಧವಾರ ಬೆಳಿಗ್ಗೆ ಶವ ಪತ್ತೆಯಾಗಿದ್ದು, ಮಣಿಕಂಠ (30) ಹಾಗೂ ತಿಮ್ಮನಾಯಕ (28) ಎಂಬುವರೇ ಸಾವನ್ನಪ್ಪಿದ ದುರ್ದೈವಿಗಳು.
ಇವರಿಬ್ಬರು ಮಂಗಳವಾರ ಸಂಜೆ 4ರ ವೇಳೆಯಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮುಗಿಸಿ ಮಂಟಿಬಿಳಗುಲಿ ಗ್ರಾಮದಲ್ಲಿದ್ದ ಕೆರೆಗೆ ಸ್ನಾನಕ್ಕಿಳಿದಿದ್ದರು. ಆದರೆ ಬಹಳಷ್ಟು ಹೊತ್ತಾದರೂ ವಾಪಾಸ್ ಬರಲಿಲ್ಲ. ಕೆರೆಯ ದಡದಲ್ಲಿ ಉಡುಪು, ಚಪ್ಪಲಿ ಹಾಗೂ ಮೊಬೈಲ್ಗಳನ್ನು ಗುರುತಿಸಿದ ಸ್ಥಳೀಯರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಸಂಶಯಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕದಳದವರು ಕೆರೆಯಲ್ಲಿ ಶೋಧಕಾರ್ಯ ನಡೆಸಿದರಾದರೂ ಶವಗಳು ಪತ್ತೆಯಾಗಲಿಲ್ಲ. ಕತ್ತಲಾದ ಕಾರಣ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿ, ಬುಧವಾರ ಬೆಳಿಗ್ಗೆ ಮತ್ತೆ ಶೋಧನಾಕಾರ್ಯ ಆರಂಭಿಸಿದರು.

ಈಜುಪರಿಣಿತರಾದ ಕುಶಾಲನಗರದ ರಾಮಕೃಷ್ಣ ಹಾಗೂ ಹುಣಸೂರಿನ ಫಕೀರ ಅವರನ್ನು ಕರೆಯಿಸಿ ಸುಮಾರು ಒಂದೂವರೆ ಗಂಟೆ ಕಾಲ ಸತತ ಕಾರ್ಯಾಚರಣೆ ನಡೆಸಿ ಕೊನೆಗೂ ಎರಡು ಶವಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ವಾರಸುದಾರರಿಗೆ ನೀಡಲಾಯಿತು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications