ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವು

ಮೈಸೂರು, ಡಿಸೆಂಬರ್ 10: ತಿ.ನರಸೀಪುರ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಇಬ್ಬರು ಕಾವೇರಿ ನದಿ ನೀರಿಗಿಳಿದ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅಲ್ಫ್ರೆಡ್ ವಿಜಯ್ (16) ಹಾಗೂ ಹೇಮಂತ್ (17) ಎಂದು ಗುರುತಿಸಲಾಗಿದೆ.

Two Students Died Drowning In Cauvery River In Mysuru

45 ವಿದ್ಯಾರ್ಥಿಗಳು, ನಾಲ್ವರು ಉಪನ್ಯಾಸಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಐವರು ವಿದ್ಯಾರ್ಥಿಗಳು ನದಿಯಲ್ಲಿ ಮುಂದೆ ಹೋಗಿ ಸ್ನಾನ ಮಾಡುತ್ತಿದ್ದರು. ಈ ವೇಳೆ ಅಲ್ಫ್ರೆಡ್, ಹೇಮಂತ್ ಮುಳುಗಿದರು. ಇವರ ರಕ್ಷಣೆಗೆ ಧಾವಿಸಿದ ಮೂವರು ನೀರಿನ ಸೆಳೆತಕ್ಕೆ ಸಿಲುಕಿದರು. ಅಲ್ಲಿದ್ದ ಅಂಬಿಗರು ಮೂವರನ್ನು ರಕ್ಷಿಸಿದ್ದಾರೆ.

ಇನ್ನಿಬ್ಬರ ನೆರವಿಗೆ ಮುಂದಾಗುವಷ್ಟರಲ್ಲಿ ಅವರು ಅದಾಗಲೇ ಮುಳುಗಿದ್ದರು ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+