ಈಜಲು ಹೋಗಿ ಮಸಣ ಸೇರಿದ ಮಸಣಾಪುರ ವಿದ್ಯಾರ್ಥಿಗಳು

ಮೈಸೂರು, ಡಿಸೆಂಬರ್, 07: ಕಬಿನಿ ನಾಲೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದ ಮಸಣಾಪುರ ಗ್ರಾಮದಲ್ಲಿ ಡಿಸೆಂಬರ್ 06ರ ಭಾನುವಾರದಂದು ನಡೆದಿದೆ.

ಹೊಂಗನೂರು ಗ್ರಾಮದ ನಿತಿನ್ (17) ರಮೇಶ್ (17) ಸಾವನ್ನಪ್ಪಿದ ದುರ್ದೈವಿಗಳು. ಈ ವಿದ್ಯಾರ್ಥಿಗಳಿಬ್ಬರು ಮಸಣಾಪುರ ಗ್ರಾಮದ ಪಕ್ಕದಲ್ಲಿರುವ ಕಬಿನಿ ಕಾಲುವೆಯಲ್ಲಿ ಈಜಲು ಹೋಗಿದ್ದಾರೆ. ಈ ಸಂದರ್ಭ ಇಬ್ಬರು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ.[ಉತ್ತರಕ್ರಿಯೆ ನಡೆಸಲು ಬಂದ ಮಗ ನೇತ್ರಾವತಿ ನದಿ ಪಾಲಾದ]

Two students died while swimming in Kabini river at Mysuru

ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ನಿತಿನ್ ಮತ್ತು ರಮೇಶ್ ಮನೆಗೆ ಹೇಳಿ ನಾಲೆಗೆ ಈಜಲು ಹೋಗಿದ್ದಾರೆ. ಎಷ್ಟೇ ಹೊತ್ತಾದರೂ ಇವರಿಬ್ಬರೂ ಮನೆಗೆ ಮರಳಿ ಬಂದಿರಲಿಲ್ಲ. ಪೋಷಕರು ಗಾಬರಿಗೊಂಡಾಗ ಇವರಿಬ್ಬರು ಕಬಿನಿ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.[ಸಮಯಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಪೊಲೀಸ್ ಪೇದೆ!]

ಮಕ್ಕಳು ಮೃತಪಟ್ಟಿರುವ ಘಟನೆ ಪೋಷಕರಿಗೆ ತಿಳಿಯುತ್ತಿದ್ದಂತೆ ನಾಲೆ ಬಳಿ ಜನರು ತೆರಳಿ ದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಈ ಸಂದರ್ಭದಲ್ಲಿ ಹೆತ್ತಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+