ನಾಗರಹೊಳೆ ಅರಣ್ಯದಲ್ಲಿ ಎರಡು ಹುಲಿ ಸಾವನ್ನಪ್ಪಿದ್ದು ಹೇಗೆ?
ಮೈಸೂರು, ಜನವರಿ,21: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಕೆಲ ದಿನಗಳಿಂದ ಎರಡು ಹುಲಿಗಳು ಸಾವನ್ನಪ್ಪಿವೆ. ಅದರಲ್ಲಿ ಒಂದು ಹುಲಿ ಆಹಾರ ಸೇವಿಸಲು ಸಾಧ್ಯವಾಗದೆ, ಮತ್ತೊಂದು ಹುಲಿ ಬೇರೊಂದು ಹುಲಿ ಜೊತೆ ಕಾದಾಡಲು ಹೋಗಿ ಮೃತಪಟ್ಟಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹುಣಸೂರು ವನ್ಯ ಜೀವಿ ವಿಭಾಗದ ಕಚುವಿನಹಳ್ಳಿಯ ತಟ್ಟೆಹಳ್ಳಪಾರೆ ಬಳಿ 12ವರ್ಷದ ಹೆಣ್ಣು ಹುಲಿ, ಆನೆಚಚೌಕೂರು ವಲಯದ ಮಾವಿನ ಮರ ಹಳ್ಳದ ಬಳಿ 9 ವರ್ಷದ ಗಂಡು ಹುಲಿ ಮೃತಪಟ್ಟಿದೆ.[ಹುಲಿ, ಮೇಕೆಯ ಹಾಡು..."ಯೇ ದೋಸತಿ ಹಮ್ ನಹಿ ಛೋಡೆಂಗೆ"]

ಹೆಣ್ಣು ಹುಲಿ ಸಾಯಲು ಕಾರಣ:
ಹುಣಸೂರು ವನ್ಯ ಜೀವಿ ವಿಭಾಗದ ಕಚುವಿನಹಳ್ಳಿ ಬಳಿ ಅರಣ್ಯ ಇಲಾಖೆ ನೌಕರರು ಗಸ್ತಿನಲ್ಲಿದ್ದಾಗ ತಟ್ಟೆಹಳ್ಳಪಾರೆ ಬಳಿ 12 ವರ್ಷದ ಹೆಣ್ಣು ಹುಲಿ ಸತ್ತಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ತಿಳಿದು ಪಶುವೈದ್ಯ ಡಾ.ಉಮಶಂಕರ್ ನೇತೃತ್ವದಲ್ಲಿ ಶವಪರೀಕ್ಷೆ ನಡೆಸಿದ್ದಾರೆ.
ಈ ಹೆಣ್ಣು ಹುಲಿಗೆ ವಯಸ್ಸಾಗಿದ್ದು, ನಾಲ್ಕು ಕೋರೆ ಹಲ್ಲುಗಳು ಸವೆದು ಹೋಗಿವೆ. ಹಾಗಾಗಿ ಆಹಾರ ಸೇವಿಸಲಾಗದೆ ಮೃತಪಟ್ಟಿದೆ ಎಂದು ಪಶು ವೈದ್ಯರು ತಿಳಿಸಿದ್ದಾರೆ. ಇದರ ಕೆಲವು ಭಾಗವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.[ಭಾರತದಲ್ಲಿ ಅಳಿವಿನ ಅಂಚಿನಲ್ಲಿದೆಯಾ ಹುಲಿ ಸಂತತಿ?]

ಗಂಡು ಹುಲಿ ಸಾವನ್ನಪ್ಪಿದ್ದು ಹೇಗೆ?
ಹುಲಿಗಳ ಕಾದಾಟದಲ್ಲಿ ಮೃತಪಟ್ಟಿದ್ದ 9 ವರ್ಷದ ಗಂಡು ಹುಲಿಯು ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಆನೆಚಚೌಕೂರು ವಲಯದ ಮಾವಿನ ಮರದ ಹಳ್ಳದ ಬಳಿ ಮತ್ತೊಂದು ಹುಲಿ ಜೊತೆ ಕಾದಾಡುವಾಗ ಸಾವನ್ನಪ್ಪಿದೆ. ಈಗಾಗಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹುಲಿ ಯೋಜನೆ ನಿರ್ದೇಶಕ ಡಾ.ಕಾಂತರಾಜ್ ಹೇಳಿದ್ದಾರೆ.[ಕುದುರೆಮುಖ ಇನ್ನು ಸಂರಕ್ಷಿತ ಹುಲಿಧಾಮ]
ಅರಣ್ಯ ಇಲಾಖೆ ಅಧಿಕಾರಿಗಳು ಪಶು ವೈದ್ಯ ಡಾ.ಉಮಶಂಕರ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸ್ವಯಂ ಸೇವಾ ಸಂಸ್ಥೆ ಮುಖ್ಯಸ್ಥರು ಮತ್ತಿತರ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ.
-
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications