ಹೊಸವರ್ಷದಂದು ಕಪಿಲಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕರು ನೀರು ಪಾಲು
ಮೈಸೂರು, ಜನವರಿ 02: ಕಪಿಲಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ ಮೂವರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಒಬ್ಬ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೆಜ್ಜಿಗೆ ಸೇತುವೆ ಬಳಿ ಮಂಗಳವಾರ ನಡೆದಿದೆ.
ಮೂಲತಃ ಉತ್ತರ ಪ್ರದೇಶದ ನಿವಾಸಿ ರಾಜೀವ್ ರಂಜನ್ ತಿವಾರಿ(28), ಕೊಲ್ಕತ್ತಾದ ಸ್ನೇಹ ಅಶೀಸ್ ಚಕ್ರವರ್ತಿ (29) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರು. ನಂಜನಗೂಡು ಚಾಮಲಾಪುರಹುಂಡಿಯ ನಿವಾಸಿ ವಿನೋದ್ ಪ್ರಾಣಾಪಾಯದಿಂದ ಪಾರಾದವರು.
ನಂಜನಗೂಡು ತಾಲೂಕಿನ ಚಾಮಲಪುರಹುಂಡಿಯ ನಿವಾಸಿ ವಿನೋದ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನೀಯರಾಗಿದ್ದು ಹೊಸವರ್ಷಾಚರಣೆಗೆಂದು ಸ್ನೇಹಿತರಾದ ರಾಜೀವ್ ರಂಜನ್ ತಿವಾರಿ ಮತ್ತು ಸ್ನೇಹ ಅಶೀಸ್ ಚಕ್ರವರ್ತಿ ನಂಜನಗೂಡಿಗೆ ಬಂದಿದ್ದರು.

ಮೂವರು ಸೇರಿ ಹೊಸವರ್ಷದಂದು ಮಂಗಳವಾರ ಬೆಳಿಗ್ಗೆ 10.30ರಂದು ನಂಜನಗೂಡಿನ ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ನೀರಿನಲ್ಲಿ ಸ್ನಾನ ಮಾಡಲು ಹೋಗಿದ್ದಾರೆ.
ಈ ಸಂದರ್ಭದಲ್ಲಿ ಈಜು ಬಾರದ ರಾಜೀವ್ ರಂಜನ್ ತಿವಾರಿ ಮತ್ತು ಸ್ನೇಹ ಅಶೀಸ್ ಚಕ್ರವರ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ವೇಳೆ ಅಲ್ಪಸ್ವಲ್ಪ ಈಜು ಕಲಿತಿದ್ದ ವಿನೋದ್ ಪ್ರಾಣಾಪಾಯದಿಂದ ಪಾರಾಗಿ ದಡ ಸೇರಿಸಿದ್ದು ಸ್ನೇಹಿತರಿಬ್ಬರು ನೀರಿನಲ್ಲಿ ಮುಳುಗಿರುವ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿದ ಮೇರೆಗೆ ಪೊಲೀಸರಿಗೆ ಸುದ್ದಿ ಮುಟ್ಟಿಸಲಾಗಿದ್ದು ತಕ್ಷಣ ಡಿಎಸ್ಪಿ ಮಲ್ಲಿಕ್, ನಗರ ಠಾಣೆಯ ಪಿಎಸ್ ಐ ಆನಂದ್ ಸ್ಥಳಕ್ಕೆ ಆಗಮಿಸಿದ್ದಾರೆ.
ಅಗ್ನಿಶಾಮಕ ಠಾಣೆಯ ಅಧಿಕಾರಿ ಬಾಬು ಅವರ ಮಾರ್ಗದರ್ಶನದಲ್ಲಿ ನುರಿತ ಈಜುಗಾರರು ಬೋಟ್ ಮತ್ತು ತೆಪ್ಪದ ಸಹಕಾರದಿಂದ ಮೃತದೇಹಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದು ಮಧ್ಯಾಹ್ನ 12.40ಕ್ಕೆ ರಾಜೀವ್ ರಂಜನ್ ತಿವಾರಿಯ ಮೃತದೇಹ ಪತ್ತೆಯಾಯಿತು.
ನಂತರ ಇನ್ನೊಬ್ಬ ಸ್ನೇಹ ಅಶೀಸ್ ಮೃತದೇಹಕ್ಕಾಗಿ ವ್ಯಾಪಕ ಶೋಧನೆ ನಡೆಸಲಾಯಿತಾದರೂ ಮೃತದೇಹ ದೊರೆಯದ ಕಾರಣ ಹುಡುಕಾಟ ಮುಂದುವರೆಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications