ಭೂಗತ ಪಾತಕಿ ರವಿಪೂಜಾರಿಯಿಂದ ಸಾ.ರಾ. ಮಹೇಶ್ ಗೆ ಬೆದರಿಕೆ?
ಮೈಸೂರು ನವೆಂಬರ್ 24 : 2018ರ ಚುನಾವಣೆಯಲ್ಲಿ ಕೆ.ಅರ್.ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ಶಾಸಕ ಸಾ.ರಾ. ಮಹೇಶ್ ಅವರಿಗೆ ಭೂಗತ ಪಾತಕಿ ರವಿ ಪೂಜಾರಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಶಾಸಕ ಸಾ.ರಾ. ಮಹೇಶ್ ಅವರು ತಮ್ಮ ಶುಕ್ರವಾರ ಮೈಸೂರಿನ ಮನೆಯಲ್ಲಿದ್ದಾಗ ಮೊಬೈಲ್ ಗ ವಿದೇಶದ ಕರೆಬಂದಿದೆ ಅದರಲ್ಲಿ ನಾನು ರವಿ ಪೂಜಾರಿ, ಯಾವುದೇ ಕಾರಣಕ್ಕೂ 2018ರ ಚುನಾವಣೆಯಲ್ಲಿ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಸ್ಪರ್ಧೆ ಮಾಡಿದರೆ ನಿಮ್ಮ ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು ಈ ಸಂಬಂಧ ಸಾ.ರಾ. ಮಹೇಶ್ ಅವರು ಮೈಸೂರು ನಗರ ಪೊಲೀಸ್ ಕಮಿಷನರ್ ಅವರನ್ನು ಬೇಟಿ ಮಾಡಿ ದೂರು ದಾಖಲಿಸಿದ್ದಾರೆ.
ರವಿ ಪೂಜಾರಿ ಈಗಾಗಲೇ ಭೂಗತನಾಗಿದ್ದುಕೊಂಡು ಡೀಲ್ ಕುದುರಿಸುತ್ತಿದ್ದು, ಶಿವಮೊಗ್ಗದ ವ್ಯಾಪಾರಿಯೊಬ್ಬರಿಗೆ ಕರೆ ಮಾಡಿ 25 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಇದೀಗ ಸಾ.ರಾ.ಮಹೇಶ್ ಅವರಿಗೆ ಬೆದರಿಕೆ ಕರೆ ಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.