ಮೈಸೂರಿನಲ್ಲಿ ನಿರ್ಮಲಾ ಸೀತಾರಾಮನ್: ಸಾಂಸ್ಕೃತಿಕ ನಗರಿಯನ್ನು ಹಾಡಿ ಹೊಗಳಿದ ಕೇಂದ್ರ ಸಚಿವೆ
ಮೈಸೂರು, ನವೆಂಬರ್ 08: ಭಾರತದಲ್ಲಿನ ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಭಿನ್ನ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರೆಯನ್ನು ಹೊಂದಿದ್ದು, ಪ್ರತಿಯೊಂದು ದೇಶದ ಇತಿಹಾಸದಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ 'ಮೈಸೂರು ಸಂಗೀತ ಸುಗಂಧ ಉತ್ಸವ' ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂಗೀತ ಪರಂಪರೆಗೆ ಕರ್ನಾಟಕ ಸಂಗೀತದ ಕೊಡುಗೆ ಮಹತ್ವವಾಗಿದ್ದು, ಜಾತಿ, ಧರ್ಮ ಹಾಗೂ ಭಾಷೆಯನ್ನು ಮೀರಿ ಇಂದು ಪ್ರಪಂಚದಾದ್ಯಂತ ಪ್ರಸಿದ್ಧಿ ಪಡೆದಿದೆ ಎಂದರು.

ಇಂದು ಸಂಗೀತ ಸುಗಂಧ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಆಯೋಜಿಸಿರುವ ಮುಖ್ಯ ಉದ್ದೇಶ, ಇಲ್ಲಿನ ವಿಜಯ ನಗರ ಸಾಮ್ರಾಜ್ಯದಂತಹ ರಾಜ ಮನೆತನಗಳ ಒಡೆಯರು ಸಂಗೀತಕ್ಕೆ ಹಾಗೂ ಅದರ ಬೆಳವಣಿಗೆಗೆ ನೀಡುರುವ ಪ್ರೋತ್ಸಾಹವಾಗಿದೆ. ಅಲ್ಲದೆ ಮೈಸೂರು ಸಂಗೀತದ ನಾಡು ಹಾಗೆಯೇ ಚಂದನದ ನಾಡು ಆಗಿದೆ. ಹಾಗಾಗಿ ಇಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿ ಆ ಕಾರ್ಯಕ್ರಮದಲ್ಲಿ ದಾಸ ಸಂಗೀತದ ಬಗ್ಗೆ ಮಾತಾಡವುದು ಹೆಮ್ಮೆಯ ವಿಷಯ ಎಂದು ಹೇಳಿದರು.
12 ನೇ ಮತ್ತು 16 ನೇ ಶತಮಾನದ ನಡುವೆ, ವಿಜಯನಗರ ಸಾಮ್ರಾಜ್ಯದ ಆಶ್ರಯದಲ್ಲಿ ಕರ್ನಾಟಕ ಸಂಗೀತವು ಪ್ರವರ್ಧಮಾನಕ್ಕೆ ಬಂದಿತು. ಈ ಸಮಯದಲ್ಲಿ ಕರ್ನಾಟಕ ಸಂಗೀತದ ಪಿತಾಮಹ ಎಂದು ಕರೆಯಲ್ಪಡುವ ಸಂತ ಪುರಂದರದಾಸರು ಲಕ್ಷಾಂತರ ಕೀರ್ತನೆಗಳು, ಭಕ್ತಿಗೀತೆಗಳನ್ನು ರಚಿಸಿದ್ದಾರೆ. ಕರ್ನಾಟಕ ಸಂಗೀತದ ಮೂಲಭೂತ ಪಾಠಗಳನ್ನು ಸಹ ರೂಪಿಸಿದ್ದಾರೆ ಎಂದರು.
18 ನೇ ಶತಮಾನವನ್ನು ಕರ್ನಾಟಕ ಸಂಗೀತದ ಸುವರ್ಣಯುಗವೆಂದು ಪರಿಗಣಿಸಬಹುದು. ಪುರಂದರ ದಾಸರ ನಂತರ ತ್ಯಾಗರಾಜ, ಮುತ್ತು ಸ್ವಾಮಿ ದೀಕ್ಷಿತರ್ ಮತ್ತು ಶ್ಯಾಮ ಶಾಸ್ತ್ರೀ ಈ ಮೂವರು ಸಂಯೋಜಕರು ಸಮಕಾಲೀನರಾಗಿದ್ದರು. ಅವರ ಸಂಯೋಜನೆಗಳಿಂದ ಕರ್ನಾಟಕ ಸಂಗೀತ ಸಂಗ್ರಹವನ್ನು ಶ್ರೀಮಂತಗೊಳಿಸಿದರು. ಅವರು ಮಧುರ ಸೌಂದರ್ಯ, ಲಯಬದ್ಧ ಮತ್ತು ಭಕ್ತಿಯ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ ಎಂದರು.
ಭಾರತವು ವಿವಿಧ ಸಂಸ್ಕೃತಿ ಭಾಷೆ ಸಂಗೀತವನ್ನು ಹೊಂದಿರುವಂತಹ ದೇಶವಾಗಿದ್ದು, ಅದನ್ನು ಉಳಿಸಿ ಬೆಳೆಸಬೇಕು. ಏಕ್ ಭಾರತ್ ವಿಕಸಿತ್ ಭಾರತ್ ಎಂಬ ಮಾತಿನ ಅರ್ಥ ಭಾರತದ ಪ್ರತಿಯೊಂದು ರಾಜ್ಯವು ಅದರಲ್ಲಿಯೂ ದಕ್ಷಿಣ ಭಾರತದ ರಾಜ್ಯಗಳು ತಮ್ಮದೇ ಆದ ಭಾಷೆ ಹಾಗೂ ಸಂಸ್ಕೃತಿಯನ್ನು ಹೊಂದಿದ್ದರೂ ನಾವು ಪ್ರತಿನಿಧಿಸುವ ದೇಶ ಒಂದೇ ಅದು ಭಾರತ. ಹಾಗಾಗಿ ಪ್ರತಿಯೊಬ್ಬರೂ ಬೇಧ-ಭಾವವನ್ನು ತೊರೆದು ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಲು ಪ್ರೋತ್ಸಾಹಿಸಿ ನಾವು ಅದಕ್ಕೆ ಕೈ ಜೋಡಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯದ ಪ್ರತಿಯೊಂದು ಜಿಲ್ಲೆಯು ತನ್ನದೇ ಆದ ಜಿ.ಐ. ಟ್ಯಾಗ್ ಗಳನ್ನು ಹೊಂದಿರುವ ವಿಭಿನ್ನ ಉತ್ಪನ್ನಗಳನ್ನು ಹೊಂದಿದೆ. ಇದನ್ನು ಗುರುತಿಸಿ ಸರ್ಕಾರ ಒಂದು ಜಿಲ್ಲೆ ಒಂದು ಉತ್ಪನ್ನ ಎಂಬ ಹೆಸರಿನಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರೋತ್ಸಾಹವನ್ನು ನೀಡಲಾಗುತ್ತಿದೆ.
ಪುರoದರದಾಸರು ಭಿಕ್ಷೆಗಾಗಿ ಮನೆ ಮನೆಗೆ ತೆರಳುವಾಗ ರಚಿಸಿದಂತಹ ಕೀರ್ತನೆಗಳು ಇಂದು ಎಲ್ಲರನ್ನು ತಲುಪಿ, ಅವರ ಪ್ರತಿಯೊಂದು ಕೀರ್ತನೆಯಲ್ಲಿಯೂ ಪುರಂದರ ವಿಠ್ಠಲನನ್ನು ನೆನೆಯುತ್ತಾರೆ. ಕನ್ನಡ ಸಂಗೀತ ಲೋಕದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಕರ್ನಾಟಿಕ್ ಸಂಗೀತದ ಬಗ್ಗೆ ತಿಳಿಯುವಾಗ ದಾಸ ಸಂಗೀತವು ಪ್ರಮುಖವಾದದ್ದಾಗಿದ್ದು, ಪುರಂದರರ ನಂತರ ಬಂದಂತಹ ಕನಕದಾಸರು, ಹರಿದಾಸರು ಹಾಗೂ ಇನ್ನಿತರರು ಅದನ್ನು ಬೆಳೆಸುವಲ್ಲಿ ತಮ್ಮನ್ನು ತಾವು ಅರ್ಪಿಸಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಇಂದು ಎಲ್ಲಾ ಭಾಷೆ, ಪ್ರದೇಶವನ್ನು ಮೀರಿ ಜನರನ್ನು ತಲುಪಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications