World Sparrow Day: ಮೈಸೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಗುಬ್ಬಚ್ಚಿ ಹಬ್ಬ ಆಚರಣೆ
ಮೈಸೂರು, ಮಾರ್ಚ್ 20: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರು ಹಾಗೂ ಆಹಾರ ಹಾಕುವ ಮೂಲಕ ಗುಬ್ಬಚ್ಚಿ ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಪ್ರಕೃತಿ ಸಮತೋಲನಕ್ಕಾಗಿ ಗುಬ್ಬಚ್ಚಿಗಳನ್ನು ಉಳಿಸೋಣ, ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ, ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ ಎಂಬ ಘೋಷವಾಕ್ಯದ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಉರಗ ತಜ್ಞ ಸ್ನೇಕ್ ಶ್ಯಾಮ್ ಸಾರ್ವಜನಿಕರಿಗೆ ಒಂದಷ್ಟು ಸಲಹೆಗಳನ್ನು ನೀಡಿದರು. 'ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿವೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ' ಎಂದು ಮನವಿ ಮಾಡಿದರು.

'ಇಂದು ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನ್ನಪ್ಪುತ್ತಿವೆ. ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿವು. ಮನುಷ್ಯರು ನಾವು ಮಾತ್ರ ಬದುಕದೇ, ಎಲ್ಲಾ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕಾಗಿದೆ. ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ. ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದೆ ಎನ್ನುವುದೇ ಬೇಸರದ ಸಂಗತಿಯಾಗಿದೆ. ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಅವುಗಳ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣವಾಗಿದೆ. ಆದ್ದರಿಂದ ಕೈಲಾದ ಮಟ್ಟಿಗೆ ಗುಬ್ಬಿಯ ಸಂಕುಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕೆಲಸವನ್ನು ಮಾಡೋಣ' ಎಂದು ಹೇಳಿದರು.
ಗುಬ್ಬಚ್ಚಿ ಸಂರಕ್ಷಿಸಿ ಎಂದ ನಟ ಆದಿ ಲೋಕೇಶ್
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಿತ್ರನಟ ಆದಿ ಲೋಕೇಶ್ ಮಾತನಾಡಿ, 'ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ. ಗುಬ್ಬಚ್ಚಿ ದಿನ ಮಾತ್ರ ಪಕ್ಷಿಗಳಿಗೆ ನೀರು ಆಹಾರ ನೀಡುವುದು ಮುಖ್ಯವಲ್ಲ. ಪ್ರತಿದಿನವೂ ಸಹ ಪಕ್ಷಿ ಸಂಕುಲನವನ್ನು ಉಳಿಸಲು ತಮ್ಮ ತಮ್ಮ ಮನೆಯ ಮೇಲೆ ಪ್ರಾಣಿ ಪಕ್ಷಿಗಳಿಗೆ ನೀರಿನ ಬಟ್ಟಲು ಅಳವಡಿಸುವ ಕೆಲಸವಾಗಬೇಕು ಎಂದು ಹೇಳಿದರು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications