ಮೈಸೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೈಸೂರು, ಡಿಸೆಂಬರ್ 16 : ದೇವರಾಜ ಮೊಹಲ್ಲಾದಲ್ಲಿರುವ ನಂಜರಾಜಬಹದ್ದೂರ್ ಛತ್ರದ ಆವರಣದಲ್ಲಿದ್ದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯೊಳಗೆ ಕೊಳೆತ ಸ್ಥಿತಿಯಲ್ಲಿ 25ರಿಂದ 30 ವರ್ಷದ ಅಪರಿಚಿತ ಯುವಕನೊಬ್ಬನ ಶವ ಪತ್ತೆಯಾಗಿದೆ.
ಪ್ರಾಥಮಿಕ ಶಾಲೆಯನ್ನು ಮುಚ್ಚಲ್ಪಟ್ಟಿದ್ದು, 4-5 ದಿನಗಳ ಹಿಂದೆ ಈ ವ್ಯಕ್ತಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಶುಕ್ರವಾರದಂದು ಕೊಳೆತ ವಾಸನೆ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ದೇವರಾಜ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್, ಸಬ್-ಇನ್ಸ್ ಪೆಕ್ಟರ್ ಲೇಪಾಕ್ಷ ಸ್ಥಳ ಮಹಜರು ನಡೆಸಿ, ಶವವನ್ನು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು.[ಕಾಸರಗೋಡು: ನಾಪತ್ತೆಯಾಗಿದ್ದ ಸಹೋದರರಿಬ್ಬರ ಶವ ಬಾವಿಯಲ್ಲಿ ಪತ್ತೆ]

ಶವ ಕೊಳೆತಿರುವುದರಿಂದ ಗುರುತು ಹಿಡಿಯುವುದು ಕಷ್ಟವಾಗಿದ್ದು, ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿಯು ಪಾನಮತ್ತನಾಗಿ ಬಂದು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ರೈತನ ಮೇಲೆ ಕರಡಿ ದಾಳಿ
ಮೈಸೂರು: ಬೆಳೆ ವೀಕ್ಷಣೆಗೆ ಜಮೀನಿಗೆ ತೆರಳಿದ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ.
ಎಚ್.ಡಿ.ಕೋಟೆ ತಾಲೋಕಿನ ಮೊಸರಳ್ಳ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅಂಕನಾಯ್ಕ(65) ಕರಡಿ ದಾಳಿಯಿಂದ ಗಾಯಗೊಂಡ ರೈತ.

ಅವರ ಎರಡು ಕೈಗಳಿಗೆ ತೀವ್ರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.












Click it and Unblock the Notifications