Arun Yogiraj: ಅಯೋಧ್ಯೆ ಶ್ರೀರಾಮನ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್ಗೆ ವೀಸಾ ನಿರಾಕರಿಸಿದ ಯುಎಸ್
ಅಯೋಧ್ಯೆ ಬಾಲರಾಮ ಮೂರ್ತಿಯನ್ನು ಕೆತ್ತನೆ ಮಾಡಿರುವ ಕರ್ನಾಟಕದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಮೆರಿಕ ವೀಸಾ ನಿರಾಕರಿಸಿದೆ. ಶಿಲ್ಪಿ ಅರುಣ್ ಯೋಗಿರಾಜ್ ಅಮೆರಿಕದ ಅಕ್ಕ ಸಮ್ಮೇಳನ ಸೇರಿದಂತೆ ನಾನಾ ಕಾರ್ಯಕ್ರಮದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸ ಹೋಗಬೇಕಿತ್ತು. ಅದಕ್ಕಾಗಿ ಅವರು ಎರಡು ತಿಂಗಳ ಮೊದಲೇ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅಮೆರಿಕ ಅವರ ವೀಸಾ ನಿರಾಕರಿಸಿದೆ.
ಆಗಸ್ಟ್ 30 ಮತ್ತು ಸೆಪ್ಟೆಂಬರ್ 1ರಂದು ಅಮೆರಿಕಾದಲ್ಲಿ ಅರುಣ್ ಯೋಗಿರಾಜ್ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಅವರು 20 ದಿನಕ್ಕೆ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಆಗಸ್ಟ್ 10ರಂದು ವೀಸಾ ನಿರಾಕರಿಸಿರುವ ಬಗ್ಗೆ ಅರುಣ್ ಯೋಗಿರಾಜ್ ಅವರಿಗೆ ಮಾಹಿತಿ ಸಿಕ್ಕಿತು. ಅಮೆರಿಕದ ನಿರ್ಬಂಧನೆಗಳನ್ನು ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ವೀಸಾ ನಿರಾಕರಣೆಯಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರುಣ್ ಯೋಗಿರಾಜ್, ಯಾವ ಕಾರಣಕ್ಕೆ ವೀಸಾ ನಿರಾಕರಿಸಿದ್ದಾರೆ ಎಂಬುದು ಗೊತ್ತಿಲ್ಲ. ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸುವ ಜತೆಗೆ ಸಹ್ಯಾದ್ರಿ ಕನ್ನಡಕೂಟದಿಂದ 'ಸರ್ವಶ್ರೇಷ್ಠ ಕನ್ನಡಿಗ' ಪ್ರಶಸ್ತಿ ಪ್ರದಾನ ಸಮಾರಂಭವೂ ಇತ್ತು. ನಮ್ಮ ವಿದೇಶಾಂಗ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ದೊರೆಯಿತು. ಆದರೆ, ಅಮೆರಿಕ ರಾಯಭಾರ ಕಚೇರಿಯಿಂದ ಯಾವುದೇ ಸಹಕಾರ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕದ ಹೆಮ್ಮೆಯ ಶಿಲ್ಪಿ
ಅರುಣ್ ಯೋಗಿರಾಜ್ ಅದ್ಭುತ ಶಿಲ್ಪಿ, ಅಯೋಧ್ಯೆ ಬಾಲರಾಮನ ವಿಗ್ರಹ ಕೆತ್ತಿದ ಬಳಿಕ ಅವರ ಜನಪ್ರಿಯತೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿತ್ತು. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲು ಮೂವರು ಶಿಲ್ಪಿಗಳು ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ್ದು, ಅದರಲ್ಲಿ ಅರುಣ್ ಯೋಗಿರಾಜ್ ಕೆತ್ತಿದ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಗೆ ಆಯ್ಕೆಯಾಗಿತ್ತು. ಬಾಲರಾಮನ ವಿಗ್ರಹ ನೋಡಿದ ಭಕ್ತಾದಿಗಳು ಭಾವಪರವಶರಾಗಿದ್ದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications