ಭೈರಪ್ಪನವರ 'ಉತ್ತರಕಾಂಡ'ಕ್ಕೆ ಕನ್ನ ಒಬ್ಬನ ವಿರುದ್ಧ ದೂರು
ಮೈಸೂರು, ಜನವರಿ 11: ಸಾಹಿತಿ ಎಸ್.ಎಲ್.ಭೈರಪ್ಪ ಅವರ ಕಾದಂಬರಿ 'ಉತ್ತರಕಾಂಡ'ವನ್ನು ಯುವಕನೊಬ್ಬ ಅಕ್ರಮವಾಗಿ ಪ್ಲೇಸ್ಟೋರ್ನಲ್ಲಿ ಅಪ್ಲೋಡ್ ಮಾಡಿದ್ದು ಆತನ ವಿರುದ್ಧ ದೂರು ದಾಖಲಿಸಲಾಗಿದೆ.
ಆತ ಅಪ್ಲೋಡ್ ಮಾಡಿದ್ದ ಕಾದಂಬರಿಯ ಪ್ರತಿಯನ್ನು ಈಗಾಗಲೇ 819 ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಸದ್ಯ ಗೂಗಲ್ ಪ್ಲೇಸ್ಟೋರ್ ನಲ್ಲಿದ್ದ ಕಾದಂಬರಿಯನ್ನು ತೆಗೆದು ಹಾಕಲಾಗಿದ್ದು, ಪೊಲೀಸರು ಯುವಕನ ವಿರುದ್ಧ ಕೃತಿ ಹಕ್ಕು ಸ್ವಾಮ್ಯ ಉಲ್ಲಂಘನೆಯ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ರಚಿಸಿರುವ ಉತ್ತರಕಾಂಡ ಕಾದಂಬರಿ 2017ರಲ್ಲಿ ಬಿಡುಗಡೆಯಾಗಿದ್ದು, ಈ ಕಾದಂಬರಿ 330 ಪುಟಗಳನ್ನ ಒಳಗೊಂಡಿದೆ. ಕಾದಂಬರಿಯ ಪ್ರತಿಯೊಂದು ಹಾಳೆಯನ್ನ ಮೊಬೈಲ್ನಲ್ಲಿ ಫೋಟೋ ತೆಗೆದು ಕನ್ನಡ ಅದನ್ನು ಆಪ್ ಆಗಿ ರೂಪಿಸಿ ಪ್ಲೇಸ್ಟೋರ್ಗೆ ಅಪ್ಲೋಡ್ ಮಾಡಿದ್ದನು.

ಈ app ಉಚಿತವಾಗಿ ಪ್ಲೇಸ್ಟೋರ್ ನಲ್ಲಿ ಸಿಗುತ್ತಿತ್ತು. ಇದನ್ನು ಮೂರೇ ತಿಂಗಳಲ್ಲಿ ಒಟ್ಟು 819 ಮಂದಿ ತಮ್ಮ ಮೊಬೈಲ್ ಗಳಿಗೆ ಡೌನ್ಲೋಡ್ ಮಾಡಿಕೊಂಡಿದ್ದರು. ಇದರ ಮಾಹಿತಿ ಪಡೆದ ಭೈರಪ್ಪ ಅವರು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಪರಾಧ ಪತ್ತೆ ವಿಭಾಗಕ್ಕೆ ತನಿಖೆಯ ಜವಾಬ್ದಾರಿ ವಹಿಸಿದ್ದರು. ದಾವಣಗೆರೆಯ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ app ರೂಪಿಸಿರುವುದಾಗಿ ಒಪ್ಪಿಕೊಂಡ. ಜೊತೆಗೆ ಹಕ್ಕುಸ್ವಾಮ್ಯ ಉಲ್ಲಂಘನೆ ಕಾಯ್ದೆ ಕುರಿತ ಅರಿವು ಇರಲಿಲ್ಲ. ಜೊತೆಗೆ ಇದರಿಂದ ಲಾಭ ಮಾಡುವ ಉದ್ದೇಶವೂ ಇರಲಿಲ್ಲ ಎಂದು ತಿಳಿಸಿದ. ಸದ್ಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂದು ಸೂಚಿಸಿ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications