ಭೈರಪ್ಪನವರ 'ಉತ್ತರಕಾಂಡ'ಕ್ಕೆ ಕನ್ನ ಒಬ್ಬನ ವಿರುದ್ಧ ದೂರು
ಮೈಸೂರು, ಜನವರಿ 11: ಸಾಹಿತಿ ಎಸ್.ಎಲ್.ಭೈರಪ್ಪ ಅವರ ಕಾದಂಬರಿ 'ಉತ್ತರಕಾಂಡ'ವನ್ನು ಯುವಕನೊಬ್ಬ ಅಕ್ರಮವಾಗಿ ಪ್ಲೇಸ್ಟೋರ್ನಲ್ಲಿ ಅಪ್ಲೋಡ್ ಮಾಡಿದ್ದು ಆತನ ವಿರುದ್ಧ ದೂರು ದಾಖಲಿಸಲಾಗಿದೆ.
ಆತ ಅಪ್ಲೋಡ್ ಮಾಡಿದ್ದ ಕಾದಂಬರಿಯ ಪ್ರತಿಯನ್ನು ಈಗಾಗಲೇ 819 ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಸದ್ಯ ಗೂಗಲ್ ಪ್ಲೇಸ್ಟೋರ್ ನಲ್ಲಿದ್ದ ಕಾದಂಬರಿಯನ್ನು ತೆಗೆದು ಹಾಕಲಾಗಿದ್ದು, ಪೊಲೀಸರು ಯುವಕನ ವಿರುದ್ಧ ಕೃತಿ ಹಕ್ಕು ಸ್ವಾಮ್ಯ ಉಲ್ಲಂಘನೆಯ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ರಚಿಸಿರುವ ಉತ್ತರಕಾಂಡ ಕಾದಂಬರಿ 2017ರಲ್ಲಿ ಬಿಡುಗಡೆಯಾಗಿದ್ದು, ಈ ಕಾದಂಬರಿ 330 ಪುಟಗಳನ್ನ ಒಳಗೊಂಡಿದೆ. ಕಾದಂಬರಿಯ ಪ್ರತಿಯೊಂದು ಹಾಳೆಯನ್ನ ಮೊಬೈಲ್ನಲ್ಲಿ ಫೋಟೋ ತೆಗೆದು ಕನ್ನಡ ಅದನ್ನು ಆಪ್ ಆಗಿ ರೂಪಿಸಿ ಪ್ಲೇಸ್ಟೋರ್ಗೆ ಅಪ್ಲೋಡ್ ಮಾಡಿದ್ದನು.

ಈ app ಉಚಿತವಾಗಿ ಪ್ಲೇಸ್ಟೋರ್ ನಲ್ಲಿ ಸಿಗುತ್ತಿತ್ತು. ಇದನ್ನು ಮೂರೇ ತಿಂಗಳಲ್ಲಿ ಒಟ್ಟು 819 ಮಂದಿ ತಮ್ಮ ಮೊಬೈಲ್ ಗಳಿಗೆ ಡೌನ್ಲೋಡ್ ಮಾಡಿಕೊಂಡಿದ್ದರು. ಇದರ ಮಾಹಿತಿ ಪಡೆದ ಭೈರಪ್ಪ ಅವರು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಪರಾಧ ಪತ್ತೆ ವಿಭಾಗಕ್ಕೆ ತನಿಖೆಯ ಜವಾಬ್ದಾರಿ ವಹಿಸಿದ್ದರು. ದಾವಣಗೆರೆಯ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ app ರೂಪಿಸಿರುವುದಾಗಿ ಒಪ್ಪಿಕೊಂಡ. ಜೊತೆಗೆ ಹಕ್ಕುಸ್ವಾಮ್ಯ ಉಲ್ಲಂಘನೆ ಕಾಯ್ದೆ ಕುರಿತ ಅರಿವು ಇರಲಿಲ್ಲ. ಜೊತೆಗೆ ಇದರಿಂದ ಲಾಭ ಮಾಡುವ ಉದ್ದೇಶವೂ ಇರಲಿಲ್ಲ ಎಂದು ತಿಳಿಸಿದ. ಸದ್ಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂದು ಸೂಚಿಸಿ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications