ಯುವ ದಸರಾದಲ್ಲಿ ಚಂದನ್ ಪ್ರೇಮ ನಿವೇದನೆ; ಅಕ್ಷಮ್ಯ ಅಪರಾಧ ಎಂದ ಸೋಮಣ್ಣ
ಮೈಸೂರು, ಅಕ್ಟೋಬರ್ 5: ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣ ಇದರಿಂದ ಕೆಂಡಾಮಂಡಲವಾಗಿದ್ದು ಇದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಚಂದನ್ ಮತ್ತು ನಿವೇದಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸೋಮಣ್ಣ, "ಯುವ ದಸರಾ ವೇದಿಕೆ ಚಾಮುಂಡಿಶ್ವರಿಯ ದೇವರ ಸನ್ನಿಧಿ. ಆ ತಾಯಿಯ ಸನ್ನಿಧಿಯಲ್ಲಿ ಈ ರೀತಿಯ ನಡೆ ಸರಿಯಲ್ಲ. ಇನ್ನು ಆರು ತಿಂಗಳಲ್ಲಿ ಅವರಿಬ್ಬರಿಗೂ ಆ ತಾಯಿ ಶಿಕ್ಷೆ ನೀಡುತ್ತಾಳೆ. ಈ ಅಪರಾಧಕ್ಕೆ ಕ್ಷಮೆಯೇ ಇಲ್ಲ" ಎಂದಿದ್ದಾರೆ.

"ಇವರು ಕನ್ನಡದವರು ಸಂಸ್ಕೃತಿ ಗೊತ್ತಿರುವವರು ಅಂದುಕೊಂಡಿದ್ದೆ. ಆದರೆ ಇವರಿಗೆ ಸಂಸ್ಕ್ರತಿ ಇಲ್ಲ. ಇವರ ವಿರುದ್ಧ ಕಾನೂನು ಕ್ರಮಕ್ಕೆ ಪೋಲಿಸ್ ಇಲಾಖೆಗೆ ಸೂಚನೆ ಕೊಟ್ಟಿದ್ದೇನೆ. ಕಾರಣ ಕೇಳಿ ನೋಟಿಸ್ ನೀಡುವುದಕ್ಕೆ ಎಸ್ಪಿಗೂ ಡೈರೈಕ್ಷನ್ ಮಾಡಿದ್ದೇನೆ. ಇದು ಯುವ ದಸರಾ ಉಪಸಮಿತಿಯ ತಪ್ಪಲ್ಲ. ಅವರೇ ಮಾಡಿಕೊಂಡಿರುವ ಯಡವಟ್ಟು. ಎಷ್ಟೇ ದೊಡ್ಡವರಾದ್ರೂ ಕಾನೂನು ಕ್ರಮ ಜರುಗಿಸುತ್ತೇನೆ" ಎಂದು ಕಿಡಿಕಾರಿದರು. ಯುವ ದಸರಾ ವೇದಿಕೆಯಲ್ಲಿ ಶುಕ್ರವಾರ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಸಹ ಯುವ ದಸರಾ ವೇದಿಕೆಯಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಗಾಯಕ ಚಂದನ್ ಶೆಟ್ಟಿ, "ತಪ್ಪಾಗಿದ್ದರೆ ಕ್ಷಮೆ ಇರಲಿ. ಪ್ರೇಮ ನಿವೇದನೆ ಮಾಡಿಕೊಳ್ಳಲು ಒಳ್ಳೆಯ ದಿನ ಅಂದುಕೊಂಡು, ನನ್ನ ಜೀವನದಲ್ಲಿ ಸಹ ಪ್ರಮುಖ ದಿನ ಎಂದುಕೊಂಡು ಮೈಸೂರಿನ ಯುವ ದಸರಾದಲ್ಲಿ ಈ ರೀತಿ ಮಾಡಿದೆ. ನನಗನ್ನಿಸಿದ್ದನ್ನು ನಾನು ಹೇಳಿದೆ, ಈ ಕುರಿತು ತಪ್ಪಾಗಿದ್ದಲ್ಲಿ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ಶುಕ್ರವಾರದ ಆ ಕಾರ್ಯಕ್ರಮಕ್ಕೆ ಸೇರಿದವರಲ್ಲಿ ಬಹುತೇಕರು ನಮ್ಮ ಹಿತೈಶಿಗಳು. ಸಪ್ರ್ರೈಸ್ ಕೊಡಬೇಕು ಎಂದುಕೊಂಡು ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದೆ" ಎಂದು ತಿಳಿಸಿದ್ದರು.
-
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ












Click it and Unblock the Notifications