ಸ್ವಪಕ್ಷದ ಬಗ್ಗೆಯೇ ಬೇಸರವ್ಯಕ್ತಪಡಿಸಿದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್
ಮೈಸೂರು, ಜನವರಿ 18: ಬಿಜೆಪಿಯಲ್ಲಿ ನಾನೊಬ್ಬ ಮೂಕ ಪ್ರೇಕ್ಷಕನಷ್ಟೇ. ಆಪರೇಷನ್ ಕಮಲದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ವಪಕ್ಷದ ಬಗ್ಗೆ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಮೂಕ ಪ್ರೇಕ್ಷಕ. ಎಲ್ಲವನ್ನೂ ನಾನು ನೋಡುತ್ತಿದ್ದೇನೆ. ಆದರೆ ನನಗೆ ಯಾವುದಕ್ಕೂ ಪ್ರತಿಕ್ರಯಿಸಲು ಆಗುತ್ತಿಲ್ಲ ಎಂದು ಬೇಸರವ್ಯಕ್ತಪಡಿಸಿದರು.
ನಾವಿರುವುದು ವಿರೋಧ ಪಕ್ಷದ ಸ್ಥಾನ. ಅಲ್ಲಿದ್ದುಕೊಂಡು ನಾವು ನಮ್ಮ ಕರ್ತವ್ಯ ನಿರ್ವಹಿಸಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಕೀಳು ರಾಜಕಾರಣ ಮಾಡಬಾರದು. ಈ ತೆರನಾದ ರಾಜಕಾರಣ ನೋಡಿ ಜನ ಬೇಸತ್ತಿದ್ದಾರೆ. ಇಂತಹವರನ್ನು ನಾವು ಯಾಕೆ ಆಯ್ಕೆ ಮಾಡಿದ್ದು ಅಂತ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಕೀಳುಮಟ್ಟದ ರಾಜಕಾರಣವನ್ನು ನಾನು ಎಂದು ನೋಡಿರಲಿಲ್ಲ. ಕರ್ನಾಟಕದ ರಾಜಕಾರಣದ ಬಗ್ಗೆ ದೇಶದಲ್ಲಿ ಒಳ್ಳೆಯ ಅಭಿಪ್ರಾಯ ಇತ್ತು. ಆದರೆ ಸದ್ಯ ಎಲ್ಲವೂ ಮಣ್ಣುಪಾಲಾಗಿದೆ ಎಂದರು.

ಸರ್ಕಾರ ಬೀಳುತ್ತದೆ ಎಂಬ ವಿಚಾರದ ಬಗ್ಗೆ ರೇವಣ್ಣನನ್ನೇ ಕೇಳಿ. ಭವಿಷ್ಯ ಹೇಳೋದ್ರಲ್ಲಿ ಎಚ್.ಡಿ ರೇವಣ್ಣ ನಿಸ್ಸೀಮ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಜೆಡಿಎಸ್ ವಿರುದ್ಧ ಕಿಡಿಕಾರಿದ ಶ್ರೀನಿವಾಸ್ ಪ್ರಸಾದ್, ಹೆಬ್ಬುಲಿ ಇರುವ ಹಳ್ಳದಲ್ಲಿ ಕತ್ತೆ ಅರಚಿಕೊಂಡು ಬಿದ್ದ ಹಾಗೆ ಆಗಿದೆ ಜೆಡಿಎಸ್ ಪಾಡು. ಮೈತ್ರಿ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಜೆಡಿಎಸ್-ಕಾಂಗ್ರೆಸ್ ನಾಯಕರುಗಳಿಗೆ ಹೊಂದಾಣಿಕೆ ಇಲ್ಲ. ಅಧಿಕಾರ ವ್ಯಾಮೋಹಕ್ಕಾಗಿ ಉಭಯ ನಾಯಕರು ಅಂತರಿಕ ಕಚ್ಚಾಟದಲ್ಲೇ ಇದ್ದಾರೆ ಎಂದು ಲೇವಡಿ ಮಾಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications