ಉಪಚುನಾವಣೆ ಕಹಿ ಅನುಭವ ಬರೆಯುತ್ತಿದ್ದಾರೆ ಶ್ರೀನಿವಾಸ ಪ್ರಸಾದ್!
ಮೈಸೂರು, ಡಿಸೆಂಬರ್ 24 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ಕೈಬಿಟ್ಟ ಕಾರಣಕ್ಕೆ ಕಾಂಗ್ರೆಸ್ ಪಕ್ಷದಿಂದ ಹೊರ ಬಂದು ಬಿಜೆಪಿ ಸೇರಿರುವ ವಿ.ಶ್ರೀನಿವಾಸ ಪ್ರಸಾದ್ ಅವರು ಉಪಚುನಾವಣೆಯಲ್ಲಿ ಸೋಲುಂಡ ಬಳಿಕ ರಾಜಕೀಯದಿಂದ ಸ್ವಲ್ಪ ಮಟ್ಟಿಗೆ ದೂರವಿದ್ದಾರೆ.
ಈಗ ಅವರೇನು ಮಾಡುತ್ತಿದ್ದಾರೆ? ಎಂಬ ಕುತೂಹಲಕ್ಕೆ ಅವರಿಂದಲೇ ಉತ್ತರ ಸಿಕ್ಕಿದೆ. ಅವರ ರಾಜಕೀಯ ಬದುಕಿನಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಸೋಲು ನಿಜಕ್ಕೂ ಮರೆಯಲಾರದ ಆಘಾತವಾಗಿದೆ. ಅದರ ಜೊತೆಗೆ ಅತಿಯಾಗಿ ಕಾಡುತ್ತಿರುವ ಉಪ ಚುನಾವಣೆ ಅವರನ್ನು ಬರೆಯುವಂತೆ ಪ್ರೇರೇಪಿಸಿದೆ ಎಂದರೂ ತಪ್ಪಾಗಲಾರದು.

ಹೀಗಾಗಿಯೇ ಅವರು ಉಪಚುನಾವಣೆ ಅವಶ್ಯಕತೆ ಇದೆಯೇ? ಉಪ ಚುನಾವಣೆಯ ಹಿಂದಿನ ರಹಸ್ಯ ಹಾಗೂ ಆಗು ಹೋಗುಗಳ ಕುರಿತಂತೆ ತಾವೇ ಸ್ವಂತ ಅನುಭವ ಆಧಾರದಲ್ಲಿ ಪುಸ್ತಕವೊಂದನ್ನು ಬರೆಯುತ್ತಿದ್ದಾರಂತೆ. ಪುಸ್ತಕವು ಅಂತಿಮ ಘಟ್ಟ ತಲುಪಿದ್ದು, ನೂತನ ವರ್ಷದಲ್ಲಿ ಈ ಪುಸ್ತಕವನ್ನು ಲೋಕಾರ್ಪಣೆ ಮಾಡುವ ಚಿಂತನೆಯಲ್ಲಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಿಂದ ದೂರ ಉಳಿಯಲಿರುವ ಅವರು ತಮ್ಮ ವ್ಯಾಪ್ತಿಯ 4 ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಗೆಲುವಿಗೆ ಬೇಕಾದ ಮಾರ್ಗದರ್ಶನವನ್ನು ಮಾಡಲಿದ್ದಾರಂತೆ.
1977 ರಿಂದ ಇಲ್ಲಿವರೆಗೆ ರಾಜಕೀಯದಲ್ಲಿ ರಾಜ್ಯ, ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಶ್ರೀನಿವಾಸ ಪ್ರಸಾದ್ ಅವರು ಅದೇ ಅನುಭವವನ್ನು ಮುಂದಿಟ್ಟುಕೊಂಡು ಅದರ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಲಹೆ, ಮಾರ್ಗದರ್ಶನ ನೀಡಲಿದ್ದಾರಂತೆ.
ಮುಂಬರುವ ಚುನಾವಣೆ ಅಷ್ಟು ಸುಲಭವಲ್ಲ. ಭಾರೀ ಜಿದ್ದಾಜಿದ್ದಿ ನಡೆಯುವುದಂತು ಖಚಿತ. ಜತೆಗೆ ಸಿದ್ದರಾಮಯ್ಯ ಅವರ ವಿರುದ್ಧವೇ ತಿರುಗಿ ಬಿದ್ದಿರುವ ಶ್ರೀನಿವಾಸ ಪ್ರಸಾದ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ತಮ್ಮ ಶಕ್ತಿ ಏನು ಎಂಬುದನ್ನು ತೋರಿಸಿ, ಸೇಡು ತೀರಿಸಿಕೊಳ್ಳುವ ಜರೂರತ್ತಿದೆ. ಮುಂದೇನಾಗುತ್ತೆ? ಎಂಬುದನ್ನು ಕಾದು ನೋಡ ಬೇಕಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications