ಅ.22ರಂದು ಅರಮನೆಯಲ್ಲಿ ವಜ್ರಮುಷ್ಠಿ ಕಾಳಗ, ಶಮಿಪೂಜೆ, ವಿಜಯಯಾತ್ರೆ
ಮೈಸೂರು, ಅಕ್ಟೋಬರ್. 21 : ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟರತ್ನಮ್ಮಣ್ಣಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿದೇವಿ ಅವರ ನಿಧನದಿಂದಾಗಿ ಮುಂದೂಡಲಾಗಿದ್ದ ವಜ್ರಮುಷ್ಠಿ ಕಾಳಗ, ಶಮಿಪೂಜೆ ಹಾಗೂ ವಿಜಯಯಾತ್ರೆಯನ್ನು ಅ.22ರಂದು ಅರಮನೆಯಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ನವರಾತ್ರಿ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯುವಾಗ ರಾಜಮನೆತನದವರು ಕೆಲವು ಕಟ್ಟುಪಾಡುಗಳನ್ನು ಅನುಸರಿಸಬೇಕಾಗುತ್ತದೆ.
ನವರಾತ್ರಿಯ ಪೂಜಾ ಸಂದರ್ಭದಲ್ಲಿ ಅರಮನೆಯ ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಸಿದ ನಂತರ ಅರಮನೆಯ ಆವರಣದಲ್ಲಿರುವ ಭುವನೇಶ್ವರಿ ದೇವಾಲಯಕ್ಕೆ ಚಿನ್ನದ ಅಡ್ಡಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯನ್ನು ಇಟ್ಟು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೆಳ್ಳಿ ರಥದಲ್ಲಿ ಕುಳಿತು ತೆರಳಿ ಶಮಿ ಪೂಜೆಯನ್ನು ಮಾಡಿ, ಬಳಿಕ ಅರಮನೆಗೆ ವಿಜಯಯಾತ್ರೆ ಬರುವ ಸಂಪ್ರದಾಯವಿದೆ.

ಈ ಕುರಿತು ಪ್ರಮೋದಾದೇವಿ ಒಡೆಯರ್ ಮಾತನಾಡಿ, ತಾಯಿ ಪುಟ್ಟರತ್ನಮ್ಮಣ್ಣಿ ಅವರ ನಿಧನದಿಂದಾಗಿ ಶುಕ್ರವಾರ (ಅ.19) ನಡೆಯಬೇಕಾಗಿದ್ದ ದಸರಾ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು.
ರಾಜಮನೆತನದ ಗುರುಗಳು ಹಾಗೂ ರಾಜ ಪುರೋಹಿತರ ಸಲಹೆಯ ಮೇರೆಗೆ ಅ.22ರಂದು ವಜ್ರಮುಷ್ಠಿ ಕಾಳಗ, ಶಮಿ ಪೂಜೆ, ವಿಜಯ ಯಾತ್ರೆ ನಡೆಸಲಾಗುತ್ತಿದೆ. ದಸರಾ ಮಹೋತ್ಸವದ ವೇಳೆಯಲ್ಲೇ ಯದುವಂಶದಲ್ಲಿ ಸಾವು ಸಂಭವಿಸಿದೆ. ಅಂಥ ಘಟನೆ 400 ವರ್ಷಗಳ ಬಳಿಕ ಸಂಭವಿಸಿದೆ.
ಈ ಕುರಿತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾಹಿತಿ ನೀಡಿದ್ದು, 1610ರಲ್ಲಿ ಆಯುಧಪೂಜೆಯ ದಿನದಂದು ರಾಜ ಒಡೆಯರ್ ಅವರ ಪುತ್ರ ಮೃತಪಟ್ಟಿದ್ದರು. ಅದಾದ ಬಳಿಕ ಈಗ ರಾಜವಂಶಸ್ಥರ ಸಾವು ದಸರಾ ವೇಳೆ ಸಂಭವಿಸಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications