ಹಾರಂಗಿ ನಾಲೆಗೆ ಮಾರುತಿ ವ್ಯಾನ್ ಉರುಳಿ ನಾಲ್ವರು ಜಲಸಮಾಧಿ
ಪಿರಿಯಾಪಟ್ಟಣ, ಆಗಸ್ಟ್ 6: ಮಾರುತಿ ವ್ಯಾನ್ ವೊಂದು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಜಲ ಸಮಾಧಿಯಾದ ಘಟನೆ ತಾಲೂಕಿನ ದೊಡ್ಡ ಕಮರವಳ್ಳಿ (ಮರಟಿ ಕೊಪ್ಪಲು) ಹಾರಂಗಿ ನಾಲೆಯಲ್ಲಿ ಸೋಮವಾರ ಸಂಭವಿಸಿದೆ.
ಪಿರಿಯಾಪಟ್ಟಣದ ಲಕ್ಷ್ಮಿಪುರದಲ್ಲಿ ವಾಸವಾಗಿದ್ದ ಪಳನಿಸ್ವಾಮಿ (40), ಪತ್ನಿ ಸಂಜು (35), ಮಗ ನಿಖಿತ್ (12), ಮಗಳು ಪೂರ್ಣಿಮಾ (14) ಮೃತಪಟ್ಟ ದುರ್ದೈವಿಗಳು. ಇವರು ಕೊಡಗು ಜಿಲ್ಲೆಯ ನಾಪೋಕ್ಲಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಪಳನಿಸ್ವಾಮಿ ದಂಪತಿಯ ಮಕ್ಕಳು ಅಂಗವಿಕಲರಾಗಿದ್ದು, ಇವರಿಗೆ ದೊಡ್ಡಕವರವಳ್ಳಿ ಅಂಚೆ ಕಚೇರಿಯಲ್ಲಿ ಸರಕಾರದಿಂದ ಬರುವ ಅಂಗವಿಕಲರ ವೇತನ ಪಡೆಯಲು ಗ್ರಾಮಕ್ಕೆ ಬರುತ್ತಿದ್ದರು. ಆ ಸಂದರ್ಭದಲ್ಲಿ ಹಾರಂಗಿ ನಾಲೆಯ ಏರಿ ಮೇಲೆ ಮಾರುತಿ ವ್ಯಾನ್ ತಿರುಗಿಸುವಾಗ ನಿಯಂತ್ರಣ ತಪ್ಪಿ, ನಾಲೆಗೆ ಉರುಳಿದೆ.

ತಕ್ಷಣ ಅಲ್ಲಿಯೆ ಬಟ್ಟೆ ಒಗೆಯುತ್ತಿದ್ದ ಮಹಿಳೆಯರು ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ, ರಕ್ಷಿಸಲು ಯತ್ನಿಸಿದರಾದರೂ ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಬೆಟ್ಟದಪುರ ಪೊಲೀಸರು ಮೃತದೇಹಗಳನ್ನು ಮತ್ತು ವ್ಯಾನ್ ಅನ್ನು ಸ್ಥಳೀಯರ ನೆರವಿನಿಂದ ಹೊರ ತೆಗೆದಿದ್ದಾರೆ.
ವ್ಯಾನ್ ನಲ್ಲಿದ್ದ ದಾಖಲಾತಿ, ಮೊಬೈಲ್ ಫೋನ್ ಮೂಲಕ ಮೃತರ ಸ್ವವಿವರದ ಮಾಹಿತಿ ಪಡೆದು ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ನಂತರ ಸಂಬಂಧಿಕರಿಗೆ ಮೃತದೇಹಗಳನ್ನು ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಭಾಸ್ಕರ್ ರಾವ್, ಸಿಪಿಐ ಸಿದ್ದಯ್ಯ, ಬೆಟ್ಟದಪುರದ ಎಸ್ ಐ ಚಿಕ್ಕಸ್ವಾಮಿ ಭೇಟಿ ನೀಡಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications