ಬೊಂಬೆಗಳ ದರ್ಬಾರ್ ನೋಡಲು ಅರಮನೆ ನಗರಿಗೆ ಇಂದೇ ಬನ್ನಿ...
ಮೈಸೂರು, ಅಕ್ಟೋಬರ್.11: ನವರಾತ್ರಿ ಸಮಯದಲ್ಲಿ ಮನೆಗಳಲ್ಲಿ ಬೊಂಬೆಗಳನ್ನು ಪ್ರತಿಷ್ಠಾಪಿಸಿ ಪೂಜಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದ್ದು, ನವನವೀನ ಬೊಂಬೆಗಳು ಮನೆಯನ್ನು ಶೋಭಿಸಿ ಮನೆಮಂದಿಗೆ ಮನೋಲ್ಲಾಸ ನೀಡುತ್ತವೆ. ಇವುಗಳನ್ನು ಕಣ್ತುಂಬಿಸಿಕೊಳ್ಳುವುದೇ ಒಂದು ಸಡಗರ.. ಸಂಭ್ರಮ..
ಒಂದೆಡೆ ಮನೆಗಳಲ್ಲಿ ಬೊಂಬೆಗಳ ದರ್ಬಾರ್ ನಡೆದರೆ ಮತ್ತೊಂದೆಡೆ ವಿವಿಧ ಬಗೆಯ, ವಿವಿಧ ನಮೂನೆಯ ಬೊಂಬೆಗಳನ್ನು ಸಾರ್ವಜನಿಕ ದರ್ಶನಕ್ಕಿಡುವುದು ನಗರಗಳಲ್ಲಿ ಕಂಡುಬರುತ್ತದೆ. ಇವುಗಳನ್ನು ಕಣ್ತುಂಬಿಸಿಕೊಂಡು ಜನ ಖುಷಿಪಡುತ್ತಾರೆ.
ಇದೀಗ ಜನ ನೋಡಲೆಂದೇ ಆಂಧ್ರದಿಂದ ಲಕ್ಷಾಂತರ ಬೊಂಬೆಗಳು ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದು, ಜಗನ್ಮೋಹನ ಅರಮನೆಯಲ್ಲಿ ಪ್ರತಿಷ್ಠಾಪಿತಗೊಂಡು ಬದುಕಿನ ವಿವಿಧ ಮಜಲುಗಳನ್ನು ತೆರೆದಿಡುತ್ತಿವೆ.
ಇಲ್ಲಿ ಪುರಾಣಗಳ ದೇವದೇವತೆಯರು ಧರೆಗಿಳಿದಿದ್ದರೆ, ಮರೆತು ಹೋದ ಹಳ್ಳಿಸೊಗಡು ನೆನಪಾಗುತ್ತದೆ. ಕಥೆ, ಕಾವ್ಯಗಳು, ಕಲೆಗಳು ಅನಾವರಣಗೊಂಡು ಮೇಳೈಸುತ್ತವೆ. ಕಣ್ಣು ಹಾಯಿಸುತ್ತಾ ಹೋದಂತೆಯೇ ಒಂದು ಚೆಂದದ ಬೊಂಬೆಗಳ ಲೋಕ ತೆರೆಯುತ್ತಾ ಹೋಗುತ್ತದೆ.
ಇಲ್ಲಿ ಏನಿದೆ ಏನಿಲ್ಲ ಎನ್ನುವಂತಿಲ್ಲ. ಎಲ್ಲವೂ ಇಲ್ಲಿಯೇ ಇದೆ ಎಂಬ ಭಾವ ಮನವನ್ನಾವರಿಸುತ್ತದೆ. ಇಲ್ಲಿರುವ ಬೊಂಬೆಗಳು ಬರೀ ಬೊಂಬೆಗಳಾಗಿರದೆ ಮಾತನಾಡುತ್ತಾ ಹೋಗುತ್ತವೆ. ಗೊಂಬೆಗಳ ಬಗ್ಗೆ ಮುಂದೆ ಇನ್ನಷ್ಟು ಮಾಹಿತಿಯಿದೆ ಓದಿ...

ಬೃಹತ್ ಬೊಂಬೆ ಪ್ರದರ್ಶನ
ಅರಮನೆಯ ಜಯಚಾಮರಾಜೇಂದ್ರ ಆರ್ಟ್ ಗ್ಯಾಲರಿ ಟ್ರಸ್ಟ್ ಆಶ್ರಯದಲ್ಲಿ ಆಂಧ್ರಪ್ರದೇಶದ ಶ್ರೀ ಗಾಯತ್ರಿ ಸೇವಾ ಟ್ರಸ್ಟ್ ಬೃಹತ್ ಬೊಂಬೆ ಪ್ರದರ್ಶನವನ್ನು ಏರ್ಪಡಿಸಿದ್ದು, ಇದು ದಸರಾ ಕಳೆದ ನಂತರವೂ ಅಂದರೆ ನವೆಂಬರ್10 ರವರೆಗೂ ನಡೆಯಲಿದೆ. ಆದರೆ ದಸರಾ ಸಮಯದಲ್ಲಿಯೇ ಈ ಬೊಂಬೆ ಪ್ರದರ್ಶನ ನಡೆಯುತ್ತಿರುವುದು ದಸರಾಕ್ಕೆ ಕಳೆಕಟ್ಟಿದಂತಾಗಿದೆ.

1 ಲಕ್ಷ ಬೊಂಬೆಗಳ ಸಂಗ್ರಹ
ಇನ್ನು ಬೊಂಬೆ ಪ್ರದರ್ಶನದ ಬಗ್ಗೆ ಮತ್ತು ಅದರ ರೂವಾರಿಯ ಬಗ್ಗೆ ಹೇಳಲೇ ಬೇಕಾಗುತ್ತದೆ. ಆಂಧ್ರಪ್ರದೇಶದ ವಿಜಯವಾಡ ಸಮೀಪದ ತೆನ್ನಾಲಿಯ ಡಾ.ಎ.ಆರ್.ಕೆ.ಚಕ್ರವರ್ತಿ ಅವರು ಈ ಪ್ರದರ್ಶನವನ್ನು ಏರ್ಪಡಿಸಿದ್ದು ಇಲ್ಲಿ ಅವರು ಸಂಗ್ರಹಿಸಿರುವ 1 ಲಕ್ಷ ಬೊಂಬೆಗಳು ಇವೆ.
ರಾಮಾಯಣ, ಮಹಾಭಾರತ, ಪೌರಾಣಿಕ ಮತ್ತು ಸಾಮಾಜಿಕ ಕ್ಷೇತ್ರ ಸೇರಿದಂತೆ ಸುಮಾರು 40 ವಿಚಾರಗಳಿಗೆ ಸಂಬಂಧಿಸಿದಂತೆ ಬೊಂಬೆಗಳನ್ನು ಸಂಗ್ರಹಿಸಿಟ್ಟಿರುವುದು ವಿಶೇಷವಾಗಿದೆ.

ಬೇರೆ ರಾಜ್ಯಗಳ ಗೊಂಬೆಗಳೂ ಇವೆ
ಸಾಮಾನ್ಯವಾಗಿ ಬೊಂಬೆ ಪ್ರದರ್ಶನ ಎಂದರೆ ಬರೀ ಬೊಂಬೆಗಳು ಇರುತ್ತವೆ. ಆದರೆ ವಿಚಾರ, ವಿಷಯಗಳಿಗೆ ತಕ್ಕಂತೆ ಬೊಂಬೆಗಳು ಇರುವುದು ಅಪರೂಪ.
ಆದರೆ ಇಲ್ಲಿ ಹಾಗಿಲ್ಲ. ಪೌರಾಣಿಕ ಪಾತ್ರಗಳಾದ ಮಹೇಶ್ವರಿ, ವೈಷ್ಣವಿ, ಚಾಮುಂಡಿ, ಆನೆ, ರುದ್ರಿ, ಸರಸ್ವತಿ, ಕೃಷ್ಣ, ಕೃಷ್ಣ ಬಲರಾಮ, ಅರ್ಜುನಂ, ಕೃಷ್ಣಾರ್ಜುನ, ಆಂಜನೇಯ, ಹಣ್ಣು ತರಕಾರಿ, ರಾಮ ಲಕ್ಷ್ಮಣ, ದೋಣಿ, ಹತ್ತು ತಲೆಯ ರಾವಣ, ಹಸು, ಶಿವ ಪಾರ್ವತಿ, ಕುಂಭಕರ್ಣ ಮೊದಲಾದ ಬೊಂಬೆಗಳಿದ್ದು ಇವುಗಳ ಜೋಡಣೆ ಚಾರಿತ್ರಿಕ, ಐತಿಹಾಸಿಕ, ಪುರಾಣ, ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುತ್ತಾ ಆಯಾ ವಿಚಾರಗಳನ್ನು ತೆರೆದಿಡುತ್ತವೆ.
ಈ ಬೊಂಬೆಗಳ ಸಂಗ್ರಹದಲ್ಲಿ ಆಂಧ್ರಪ್ರದೇಶ, ಮಧ್ಯಪ್ರದೇಶ, ಒರಿಸ್ಸಾ, ಕರ್ನಾಟಕ ರಾಜ್ಯಗಳ ಬೊಂಬೆಗಳಿವೆ.

ನಿಜಕ್ಕೂ ಶ್ಲಾಘನೀಯ ವಿಚಾರ
ಇಷ್ಟಕ್ಕೂ ಮೈಸೂರಿನಲ್ಲಿ ಇಂತಹವೊಂದು ಪ್ರದರ್ಶನ ಏರ್ಪಡಿಸುವ ಮೂಲಕ ಜಯಚಾಮರಾಜೇಂದ್ರ ಆರ್ಟ್ ಗ್ಯಾಲರಿ ಟ್ರಸ್ಟ್ ಕಲೆ, ಸಂಸ್ಕೃತಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ಶ್ರಮವಹಿಸಿರುವುದು ನಿಜಕ್ಕೂ ಶ್ಲಾಘನೀಯ ವಿಚಾರವಾಗಿದೆ.
ಮೈಸೂರಿಗೆ ಆಗಮಿಸುವ ಪ್ರವಾಸಿಗರು ನಗರ ಪ್ರದಕ್ಷಿಣೆ ಮಾಡುವ ವೇಳೆ ಬೊಂಬೆಗಳ ಪ್ರದರ್ಶನ ನಡೆಯುತ್ತಿರುವ ಜಗನ್ಮೋಹನ ಅರಮನೆಯತ್ತ ಹೆಜ್ಜೆ ಹಾಕಿದರೆ ಪ್ರದರ್ಶನ ಆಯೋಜಿಸಿದಕ್ಕೆ ಸಾರ್ಥಕವಾಗುತ್ತದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications