ವರುಣ ಸಿದ್ದರಾಮಯ್ಯಗೆ ಲಕ್ಕಿ ಕ್ಷೇತ್ರ, ಹೇಗೆ ಅಂತೀರಾ?, ಇಲ್ಲಿದೆ ಮಾಹಿತಿ
ಮೈಸೂರು, ಮೇ, 19: ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಕೂಡ ಪ್ರಕಟವಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ವರುಣ ಸಿದ್ದರಾಮಯ್ಯ ಅವರ ಪಾಲಿಗೆ ಅದೃಷ್ಟದ ಕ್ಷೇತ್ರವಾಗಿದೆ. ವರುಣದಿಂದ ಮೂರು ಬಾರಿ ಆಯ್ಕೆಯಾದ ಸಿದ್ದರಾಮಯ್ಯ ಅವರಿಗೆ ಮಹತ್ತರ ಹುದ್ದೆ ಅರಸಿ ಬಂದಿದೆ.
ಕಳೆದ ಬಾರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ, ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ವಿರುದ್ಧ ಪರಾಭವಗೊಂಡಿದ್ದರು. ಆದರೆ, ಬಾದಾಮಿಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿ ಸಿದ್ದರಾಮಯ್ಯ ಅವರು ಮತ್ತೆ ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದರು. ಕೋಲಾರದಲ್ಲಿ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದರು. ಆದರೆ, ಡಾ.ಯತೀಂದ್ರ ಅವರು ತಮ್ಮ ವರುಣ ಕ್ಷೇತ್ರ ತ್ಯಾಗ ಮಾಡಿದ ಪರಿಣಾಮ ಅಲ್ಲಿಂದಲೇ ಸ್ಪರ್ಧಿಸಿದ್ದರು.

ವರುಣ ಅದೃಷ್ಟದ ಕ್ಷೇತ್ರ
2008ರಲ್ಲಿ ಕ್ಷೇತ್ರ ಮರು ವಿಂಗಡನೆಯಾದಾಗ ವರುಣ ಕ್ಷೇತ್ರದಲ್ಲಿ ಚುನಾವಣೆ ಆರಂಭವಾಯಿತು. ಮೈಸೂರು, ನಂಜನಗೂಡು, ತಿ.ನರಸೀಪುರದ ಕೆಲವು ಭಾಗಗಳೊಂದಿಗೆ ವರುಣ ಕ್ಷೇತ್ರ ಶುರುವಾಯಿತು. ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸ್ಪರ್ಧಿಸಿದರು. ಅಲ್ಲದೆ, ಜಯಭೇರಿ ಬಾರಿಸಿ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದರು.
ನಂತರ 2013ರಲ್ಲಿ ಮತ್ತೆ ವರುಣದಿಂದ ಗೆದ್ದ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ ಆಯ್ಕೆಯಾದರು. ಇದೀಗ 2023ರಲ್ಲಿ ಮತ್ತೆ ವರುಣದಿಂದ ಸ್ಪರ್ಧಿಸಿ ಗೆದ್ದು ಎರಡನೇ ಬಾರಿಗೆ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ನಿಜವಾಯ್ತು ಡಾ.ಯತೀಂದ್ರ ಭವಿಷ್ಯ
ಹಾಗೆ ನೋಡಿದರೆ ಸಿದ್ದರಾಮಯ್ಯ ಅವರು ಕಳೆದ ಬಾರಿ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ರೂಪಿಸುವ ಉದ್ದೇಶದಿಂದ ವರುಣ ಕ್ಷೇತ್ರವನ್ನು ತಮ್ಮ ಮಗನಿಗೆ ಬಿಟ್ಟುಕೊಟ್ಟಿದ್ದರು. ಹಾಗಾಗಿ ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಆದರೆ, ಈ ಬಾರಿ ಮಗ ಯತೀಂದ್ರ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದರು.
ಅಲ್ಲದೆ, ಅಪ್ಪನಿಗೆ ವರುಣ ಅದೃಷ್ಟದ ಕ್ಷೇತ್ರ. ಇಲ್ಲಿ ನಿಂತು ಸ್ಪರ್ಧೆ ಮಾಡಿದರೆ ಗೆದ್ದು ಖಂಡಿತ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದ್ದರು. ಇದೀಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಮಾತು ನಿಜವಾಗಿದೆ.
ರಾಜಕೀಯ ಶಕ್ತಿ ಬರುತ್ತದೆ
ಈ ಬಾರಿ ವರುಣ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿವರ್ತನೆಗೊಂಡಿತ್ತು. ಇದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ವಿ.ಸೋಮಣ್ಣ ಸ್ಪರ್ಧಿಸಿದ್ದರು. ಗೃಹ ಸಚಿವ ಅಮಿತ್ ಶಾ ಕೂಡ ವರುಣದಲ್ಲಿ ಸಾರ್ವಜನಿಕ ಸಭೆ ನಡೆಸಿದ್ದರು. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ರೋಡ್ ಶೋ ನಡೆಸಿದ್ದರು. ಸಿದ್ದರಾಮಯ್ಯ ಅವರ ಪರ ನಟಿ ರಮ್ಯಾ, ನಿಶ್ವಿಕಾ ನಾಯ್ಡು, ನಟರಾದ ದುನಿಯಾ ವಿಜಯ್ ಹಾಗೂ ಲೂಸ್ ಮಾದ ಪ್ರಚಾರ ಮಾಡಿ ಗಮನ ಸೆಳೆದಿದ್ದರು.
ಸಿದ್ದರಾಮಯ್ಯ ಕೂಡ ಕಡೆಯ ಐದು ದಿನ ವರುಣದಲ್ಲೇ ಬೀಡುಬಿಟ್ಟು ಗೆಲುವಿಗೆ ಬೇಕಾದ ರಣತಂತ್ರ ರೂಪಿಸಿದ್ದರು. ಅಲ್ಲದೆ, ನನ್ನನ್ನು ಗೆಲ್ಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿದಂತೆ. ಇದರಿಂದ ನನಗೆ ರಾಜಕೀಯ ಶಕ್ತಿ ಬರುತ್ತದೆ ಎಂದಿದ್ದರು. ಇದೀಗ ಅವರ ಮಾತಿನಂತೆ ರಾಜ್ಯದಲ್ಲಿ ರಾಜಕೀಯ ಶಕ್ತಿ ಸಿದ್ದರಾಮಯ್ಯ ಅವರಿಗೆ ದೊರೆತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications