ಮುಕ್ತ ವಿವಿ ಮಾನ್ಯತೆ ರದ್ದಿಗೆ ವಾಸ್ತು ದೋಷ ಕಾರಣವೇ!?
ಮೈಸೂರು, ನವೆಂಬರ್ 11: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾನ್ಯತೆ ಕಳೆದುಕೊಳ್ಳಲು ಹೊಸ ಕಟ್ಟಡದ ವಾಸ್ತು ದೋಷ ಕಾರಣ ಎಂದು ಹಿರಿಯ ಅಧಿಕಾರಿಗಳು ಕಚೇರಿ ಅದಲು ಬದಲು ಮಾಡಿ ಇದೀಗ ಅಪಹಾಸ್ಯಕ್ಕೀಡಾಗಿದ್ದಾರೆ.
ಮಾನ್ಯತೆ ಕಳೆದುಕೊಳ್ಳಲು ಕಚೇರಿಯ ವಾಸ್ತು ಕಾರಣವೆಂದು ಕುಲಪತಿ ಮತ್ತು ಕುಲಸಚಿವರ ಕಚೇರಿಯನ್ನ ಅದಲು ಬದಲು ಮಾಡಿಕೊಂಡಿದ್ದಾರೆ. ವಾಸ್ತು ಮೊರೆ ಹೋದ ಕುಲಪತಿ ಪ್ರೊ.ಶಿವಲಿಂಗಯ್ಯ,ಕುಲಸಚಿವ ಡಾ.ಚಂದ್ರಶೇಖರ್ ಕಚೇರಿ ಅದಲು ಬದಲು ಮಾಡಿಕೊಂಡಿದ್ದಾರೆ. ಎನ್ನಲಾಗುತ್ತಿದೆ. ಕೋಟ್ಯಾಂತರ ರೂ ಖರ್ಚು ಮಾಡಿ ಕಟ್ಟಡಗಳನ್ನ ಕಟ್ಟಿಸಲಾಗಿದ್ದು, ಇದೀಗ ವಿವಿಯ ಹಿರಿಯ ಅಧಿಕಾರಿಗಳು ವಾಸ್ತು ದೋಷ ಎಂದು ಕಚೇರಿಯನ್ನ ಬದಲಿಸಿದ್ದಾರೆ.

ಇತ್ತ ಯುಜಿಸಿ ವಿರುದ್ಧ ಕೆಎಸ್ ಓಯು ಅಧಿಕಾರಿಗಳಿಂದ ದಾವೆ:
ಇನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಮಾನ್ಯತೆ ನೀಡಲು ಮೀನಾಮೇಷ ಎಣಿಸುತ್ತಿರುವ ಯುಜಿಸಿ ವಿರುದ್ದ ಕೆಎಸ್ ಓಯು ಅಧಿಕಾರಿಗಳು ಕಾನೂನು ಸಮರಕ್ಕೆ ನಿಂತಿದ್ದಾರೆ.
ಮಾತಿಗೆ ಬಗ್ಗದ ಯುಜಿಸಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಕೆಎಸ್ ಓಯು ಅಧಿಕಾರಿಗಳು, ಹೈಕೋರ್ಟ್ ಅಲ್ಲಿ ಯುಜಿಸಿ ವಿರುದ್ದ ದಾವೆ ಹೂಡಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮಾನ್ಯತೆಗೆ ಅರ್ಜಿ ಸಲ್ಲಿಸಿದ್ದರೂ ಯಾಕೆ ಮಾನ್ಯತೆ ನೀಡ್ತಿಲ್ಲ ಎಂದು ಪ್ರಶ್ನಿಸಿ ದಾವೆ ಹೂಡಿದ್ದಾರೆ.
ರಿಟ್ ಆಫ್ ಮ್ಯಾಂಡಮಸ್ ಮೂಲಕ ಅರ್ಜಿ ಸಲ್ಲಿಕೆಯಾಗಿದ್ದು, ಮಂಗಳವಾರ ಈ ಅರ್ಜಿ ವಿಚಾರಣೆಗೆ ಬರಲಿದೆ.ಕಳೆದ ಮೂರು ವರ್ಷಗಳಿಂದ ಕೆಎಸ್ ಓಯು ಮಾನ್ಯತೆ ಕಳೆದುಕೊಂಡಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. ಹೀಗಾಗಿ ಈ ವರ್ಷವಾದರೂ ಮಾನ್ಯತೆ ಪಡೆಯಲು ಕೆಎಸ್ ಓಯು ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications