ದ್ರೋಣನ ಸಾವಿನ ತನಿಖೆಯಾಗಲಿ:ಅರಮನೆ ಮುಂದೆ ಮಲಗಿ ವಾಟಾಳ್ ಪ್ರತಿಭಟನೆ
ಮೈಸೂರು, ಮೇ 2:ದಸರಾ ಆನೆ ದ್ರೋಣನ ಸಾವಿನ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಮೈಸೂರು ಅರಮನೆ ಮುಂದೆ ಮಲಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು.
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ದ್ವಾರದ ಅರಮನೆ ಬಾಗಿಲಲ್ಲಿ ಮಲಗಿ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಆನೆಗಳನ್ನು ದಸರಾ ಸಂದರ್ಭದಲ್ಲಿ ಮಾತ್ರ ಚೆನ್ನಾಗಿ ಪೋಷಣೆ ಮಾಡಿ ಪೋಷಕಾಂಶಗಳ ಕೊಟ್ಟು ಪೋಷಿಸುತ್ತಾರೆ. ದ್ರೋಣ ಸಾಯುವ ಸಮಯದಲ್ಲಿ ಯಾವ ರೀತಿ ಆಹಾರ ನೀಡಿದರು? ಯಾವ ರೀತಿ ನೋಡಿಕೊಳ್ಳುತ್ತಿದ್ದರು? ಎಂಬುದು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಬಂಡೀಪುರ ಹುಲಿ ರಕ್ಷಿತಾರಣ್ಯದ ಮೂಲಕ ಕೇರಳ ಸಂಪರ್ಕಿಸುವ ರಸ್ತೆಯಲ್ಲಿ ಸದ್ಯ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ಈಗ ಇದನ್ನು ತೆರವುಗೊಳಿಸುವ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.












Click it and Unblock the Notifications