ಮೈಸೂರಲ್ಲಿ ವಾಟಾಳ್ ಏಕಾಂಗಿ ಪ್ರತಿಭಟನೆ
ಮೈಸೂರು,
ಜನವರಿ 28 : ಮೈಸೂರಿನ ಪ್ರತಿಷ್ಠಿತ ಲಲಿತ್ ಮಹಲ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಲಲಿತ್ ಮಹಲ್ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. id="toptextpromo"> id='are-slot-1' class='oiad oi-axt oiadv'> id='top-searched-articles'>ವಿಭಿನ್ನ
ಪ್ರತಿಭಟನೆಯ ಮೂಲಕ ಗಮನ ಸೆಳೆಯುವ ವಾಟಾಳ್ ನಾಗರಾಜ್ ಶನಿವಾರ ಲಲಿತ್ ಮಹಲ್ ಎದುರು ಚಾಪೆಯನ್ನು ಹಾಸಿ ಅದರ ಮೇಲೆ ಮಲಗುವ ಮೂಲಕ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಲಲಿತ ಮಹಲ್ ಪಾರಂಪರಿಕ, ಐತಿಹಾಸಿಕ ಕಟ್ಟಡವಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. id='are-slot-2' class='oiad oi-axt oiadv'>












Click it and Unblock the Notifications