ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನಲ್ಲಿ ನಿಧನ
ಮೈಸೂರು, ಆ. 20: ಕಡುಕಪ್ಪು, ಗಟ್ಟಿಯಾದ ಒಣಕಲ ದೇಹ, ದಪ್ಪಮೀಸೆ, ವ್ಯಾಘ್ರ ನೋಟದ ವನ ಸಂಚಾರಿ, ಕಾಡುಗಳ್ಳ ಕೂಸೆ ಮುನಿಸ್ವಾಮಿ ವೀರಪ್ಪನ್ ಎಂಬ ಕುಖ್ಯಾತ ಮತ್ತು ಭಯಾನಕ ಪ್ರತಿಭೆಯ ಹೆಸರು ಕೇಳಿದರೆ ಸಾಕು ಇಂದಿಗೂ ಅದೇನೋ ಒಂದು ಬಗೆಯ ಕುತೂಹಲ, ಆಸಕ್ತಿ. ಕೇವಲ 17 ವರ್ಷಕ್ಕೆ ಪ್ರಾಣಿಗಳನ್ನು ಬೇಟೆ ಆಡುತ್ತಾ, ಗಂಧದ ಮರಗಳನ್ನು ಕಡಿಯುತ್ತಾ 1970ರಲ್ಲಿ ಕಳ್ಳಸಾಗಣೆ ಗುಂಪೊಂದನ್ನು ಸೇರುವ ವೀರಪ್ಪನ್ ಆನಂತರ 2004ರವರೆಗೆ ನಡೆಸಿದ ಅಟ್ಟಹಾಸ, ಹತ್ಯೆಗಳು, ಅಪಹರಣ ಎಲ್ಲವೂ ಚರಿತ್ರೆಯ ಪುಟದಲ್ಲಿ ದಾಖಲಾಗಿರುವುದು ತಿಳಿದಿರುವ ವಿಷಯವೇ. ಈತನ ಅಟ್ಟಹಾಸಕ್ಕೆ ಕೆಲವು ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳು, ಸಿಬ್ಬಂದಿ, ಕೆಲ ಅಮಾಯಾಕರು ಬಲಿಯಾದರು. ಇನ್ನು ಕೆಲವರು ಈತನ ಸಹವಾಸ ಮಾಡಿ ಸಂಸಾರವನ್ನು ನಡುನೀರಿನಲ್ಲಿ ಬಿಟ್ಟು ಜೈಲು ಪಾಲಾದರು.
ಈ ಪೈಕಿ ಪಾಲಾರ್ ಬಾಂಬ್ ಸ್ಪೋಟದ ಭಾಗಿದಾರ ಬಿಲವೇಂದ್ರನ್ ಕೂಡ ಒಬ್ಬ. ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಬಿಲವೇಂದ್ರನ್ (70) ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ನಿನ್ನೆ ಮಧ್ಯರಾತ್ರಿ ಸಾವನ್ನಪ್ಪಿದ್ದಾನೆ. ಈ ಬಿಲವೇಂದ್ರನ್ 1993ರ ಬಾಂಬ್ ಬ್ಲಾಸ್ಟ್ ಪ್ರಮುಖ ಆರೋಪಿ. ಪ್ರಕರಣದಲ್ಲಿ 22 ಪೊಲೀಸರು ಸಾವನ್ನಪ್ಪಿದ್ದರು.
ಆರೋಪಿಗೆ ಮರಣ ದಂಡನೆ ಶಿಕ್ಷೆ ನೀಡಲಾಗಿತ್ತು. ನಂತರ 2014ರಲ್ಲಿ ಅದನ್ನು ಜೀವಾವದಿ ಶಿಕ್ಷೆಗೆ ಮಾರ್ಪಡಿಸಲಾಗಿತ್ತು.

2014ರಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮೈಸೂರಿನ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಒಂದು ವಾರದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಬಿಲವೇಂದರ್ ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆ ನಂತರ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications