ಮೈಸೂರಿನಲ್ಲಿ ಕೈಕೊಟ್ಟ ವೆಂಟಿಲೇಟರ್, ರೋಗಿ ನಿಧನ
ಮೈಸೂರು, ಫೆಬ್ರವರಿ 8: ವೆಂಟಿಲೇಟರ್ ನ್ನು ಸರಿಯಾಗಿ ನಿರ್ವಹಿಸದೇ ರೋಗಿಯೊಬ್ಬರು ಮೃತಪಟ್ಟ ಘಟನೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಜರುಗಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಮೃತರ ಮಗ ಆರೋಪಿಸಿದ್ದಾರೆ.
ಮೇಟಗಳ್ಳಿ ಬಿ.ಎಂ.ಶ್ರೀನಗರ ನಿವಾಸಿ ಚಿಕ್ಕಮಾದು (68) ಮೃತಪಟ್ಟವರು. ಇವರು ವಾರದ ಹಿಂದೆ ಬನ್ನಿಮಂಟಪದ ಬಳಿ ಅಪಘಾತಕ್ಕೀಡಾಗಿ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಅಲ್ಲಿ ವೆಂಟಿ ಲೇಟರ್ ಇಲ್ಲದಿರುವುದರಿಂದ ಅವರನ್ನು ಮಿಶಿನ್ ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿತ್ತು.
ಮಿಶಿನ್ ಆಸ್ಪತ್ರೆಯಲ್ಲಿ ವೆಚ್ಚದ ಬಾಬ್ತು ಒಂದು ಲಕ್ಷದವರಗೆ ಬಂದುದರಿಂದ ಚಿಕ್ಕಮಾದು ಅವರ ಮಗ ಸ್ಥಳೀಯ ಶಾಸಕರ ನೆರವಿನಿಂದ ಕೆ.ಆರ್.ಆಸ್ಪತ್ರೆಗೆ ವೆಂಟಿಲೇಟರ್ ಹಾಕಿಸಿ ತಂದೆಯನ್ನು ಮತ್ತೆ ಕೆ.ಆರ್.ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗಾಗಿ ದಾಖಲಿಸಿದ್ದರು.

ಆದರೆ ಮಂಗಳವಾರ ರಾತ್ರಿ ವೆಂಟಿಲೇಟರ್ ಕೆಟ್ಟ ಪರಿಣಾಮ ಚಿಕ್ಕಮಾದು ಸಾವನ್ನಪ್ಪಿದ್ದಾರೆ. ಆದರೆ ಅವರ ಮಗ ವೈದ್ಯರ ನಿರ್ಲಕ್ಷ್ಯದಿಂದ ತನ್ನ ತಂದೆ ಸಾವನ್ನಪ್ಪಿದ್ದಾರೆ. ಅವರಿಗೆ ವೆಂಟಿಲೇಟರ್ ನ್ನು ಸರಿಯಾಗಿ ನಿರ್ವಹಣೆ ಮಾಡಲು ಬರುತ್ತಿಲ್ಲ. ಒಬ್ಬರಿಂದ ಒಬ್ಬರಿಗೆ ವರ್ಗಾಯಿಸುತ್ತಲೇ ಇರುತ್ತಾರೆ ಎಂದು ಆರೋಪಿಸಿ ದೂರು ನೀಡಲು ಮುಂದಾಗಿದ್ದಾರೆ. ಚಿಕ್ಕಮಾದು ಅವರ ಮೃತ ಶರೀರವನ್ನು ಕೆ.ಆರ್.ಆಸ್ಪತ್ರೆಯ ಶಾವಾಗಾರದಲ್ಲಿರಿಸಲಾಗಿದೆ.
ಗುಡಿಸಲುಗಳಿಗೆ ಬೆಂಕಿ, ಪಾರಾದ ನಿವಾಸಿಗಳು
ಮೈಸೂರು: ಮೈಸೂರಿನ ಕೆಸರೆ ಕುರಿಮಂಡಿ ಬಡಾವಣೆಯ ಎ ಬ್ಲಾಕ್ ನಲ್ಲಿ ಎರಡು ಗುಡಿಸಲುಗಳಿಗೆ ಬಿಂಕಿ ಬಿದ್ದಿದ್ದು, ಗುಡಿಸಲು ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ.
ಕುರಿಮಂಡೆ ಬಡಾವಣೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿರಬೇಕೆಂದು ಶಂಕಿಸಲಾಗಿದೆ. ಆದರೆ ಮಲಗಿದ್ದವರು ಹೊರಬಂದು ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪ್ರದೇಶ ನೂರಕ್ಕೂ ಹೆಚ್ಚು ಗುಡಿಸಲುಗಳನ್ನು ಹೊಂದಿದ್ದು, ಭಾರೀ ದುರಂತ ಸಂಭವಿಸುತ್ತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ಸಾಗಾಣೆ ವಾಹನ ವಶ
ಮೈಸೂರು: ಮೈಸೂರು ಜಿಲ್ಲಾ ಅಪರಾಧ ದಳ ಯಶಸ್ವಿ ಕಾರ್ಯಾಚರಣೆ ನಡೆಸಿ ಮೈಸೂರಿನಲ್ಲಿ ಅಕ್ರಮವಾಗಿ ಮರಳು ಸಾಗಾಣೆ ನಡೆಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದೆ.
ಕೆ.ಆರ್.ತಾಲ್ಲೂಕಿನ ಗ್ರಾಮಗಳಾದ ಕಗ್ಗೆರೆ, ಹಳೇ ಎಡತೊರೆ, ದೊಡ್ಡಕೊಪ್ಪಲು ಗ್ರಾಮದ ಬಳಿ ಅಕ್ರಮ ಮರಳು ಸಾಗಾಣೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ವಾಹನ ಚಾಲಕರು ಸೇರಿದಂತೆ 5 ಜನರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಈಶ್ವರ, ಅನಂದ, ದಿನೇಶ, ರಾಮಚಂದ್ರ ಮತ್ತು ಅವಿನಾಶ್ ಎಂದು ಗುರುತಿಸಲಾಗಿದೆ.ಕೆ.ಆರ್.ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications