ವಿ. ಜಿ. ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ವಿಧಿವಶ
ಮೈಸೂರು, ಆಗಸ್ಟ್ 25 : ಕೆಫೆ ಕಾಫಿ ಡೇ ಮಾಲೀಕ ದಿ.ವಿ. ಜಿ. ಸಿದ್ದಾರ್ಥ ಕುಟುಂಬಕ್ಕೆ ಮತ್ತೊಂದು ಅಘಾತ ಎದುರಾಗಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿ. ಜಿ. ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ವಿಧಿವಶರಾದರು.
ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಂಗಯ್ಯ ಹೆಗ್ಡೆ (94) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Recommended Video

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅಳಿಯ ವಿ.ಜಿ. ಸಿದ್ಧಾರ್ಥ ಜುಲೈ 29ರಂದು ಸಾವನ್ನಪ್ಪಿದ್ದರು. ವಿ.ಜಿ. ಸಿದ್ಧಾರ್ಥ ಸಾವನ್ನಪ್ಪುವ ಮೊದಲೇ ಗಂಗಯ್ಯ ಹೆಗ್ಡೆ ಕೋಮಾಕ್ಕೆ ಜಾರಿದ್ದರು. ಆದ್ದರಿಂದ, ಕೊನೆಯ ತನಕ ಪುತ್ರನ ಸಾವಿನ ವಿಚಾರ ಅವರಿಗೆ ತಿಳಿಯಲೇ ಇಲ್ಲ.
ವಿ.ಜಿ. ಸಿದ್ಧಾರ್ಥ ಮಂಗಳೂರಿಗೆ ಭೇಟಿ ನೀಡುವ ಹಿಂದಿನ ದಿನ ಮೈಸೂರಿಗೆ ತೆರಳಿ ತಂದೆಯ ಆರೋಗ್ಯ ವಿಚಾರಿಸಿದ್ದರು. ತಂದೆಯ ಜೊತೆ ಅವರು ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಗಂಗಯ್ಯ ಹೆಗ್ಡೆ ಮೂಲತಃ ಕೃಷಿಕರು. ಚೇತನಹಳ್ಳಿಯಲ್ಲಿ ತೋಟವನ್ನು ಮಾಡಿದವರು ಅವರೇ. ಊರಿನ ಜನರು ಪ್ರೀತಿಯಿಂದ ಅವರನ್ನು ಅಯ್ಯ ಎನ್ನುತ್ತಿದ್ದರು. ನಾಲ್ಕು ವರ್ಷದ ಹಿಂದೆ ಅವರು 90 ವರ್ಷಕ್ಕೆ ಪಾದಾರ್ಪಣೆ ಮಾಡಿದಾಗ 'ಚೇತನ' ಎಂಬ ಪುಸ್ತಕವನ್ನು ಹೊರತರಲಾಗಿತ್ತು. ಎಸ್. ಎಂ. ಕೃಷ್ಣ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications