ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿ; ವಿಎಚ್‌ಪಿ ಆಗ್ರಹ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 26: ಹಿಂದೂ ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂಬ ಕೂಗಿಗೆ ಮೈಸೂರಿನ ವಿಶ್ವ ಹಿಂದೂ ಪರಿಷತ್ ಧ್ವನಿಗೂಡಿಸಿದೆ.

ಶಾಲಾ- ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಬಾರದು. ಅದು ಧಾರ್ಮಿಕತೆ ಭಾಗ ಅಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದನ್ನು ಖಂಡಿಸಿ ಇತ್ತೀಚೆಗೆ ಮುಸ್ಲಿಂ ಸಮುದಾಯದ ವ್ಯಾಪಾರಿಗಳು 1 ದಿನ ವ್ಯಾಪಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ರಾಜ್ಯದ 3ನೇ ಶ್ರೀಮಂತ ದೇವಸ್ಥಾನ ಕೊಲ್ಲೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ!ರಾಜ್ಯದ 3ನೇ ಶ್ರೀಮಂತ ದೇವಸ್ಥಾನ ಕೊಲ್ಲೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ!

ಅಲ್ಲದೆ, ಪ್ರಸ್ತುತ ಈ ವಿವಾದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಹಿಂದೂ ದೇವಾಸ್ಥಾನದಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂಬ ಕೂಗ ಕೇಳಿ ಬಂದಿದೆ.

VHP Urged To Ban On Stalls of Muslim Traders In Chamundeshwari Temple in Chamundi Hills

ಉಡುಪಿಯ ಕಾಪು ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವನ್ನು ಹಿಂದೂ ಸಂಘಟನೆಗಳು ನಿರ್ಬಂಧಿಸಿವೆ. ಇದೀಗ ರಾಜ್ಯದ ಇತರ ಭಾಗಗಳಿಗೂ ಇದು ವ್ಯಾಪಿಸುತ್ತಿದೆ. ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂರಿಂದ ವ್ಯಾಪಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಧಾರ್ಮಿಕ ದತ್ತಿ ಇಲಾಖೆಗೆ ವಿಶ್ವ ಹಿಂದೂ ಪರಿಷತ್ ಮೈಸೂರು ಘಟಕದಿಂದ ಮನವಿ ಸಲ್ಲಿಕೆಯಾಗಿದೆ.

VHP Urged To Ban On Stalls of Muslim Traders In Chamundeshwari Temple in Chamundi Hills

ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ವಿಶ್ವ ಹಿಂದೂ ಪರಿಷತ್ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ. ಸದ್ಯ ಚಾಮುಂಡಿ ಬೆಟ್ಟದಲ್ಲಿ 5 ಮುಸ್ಲಿಮರ ಅಂಗಡಿಗಳಿರುವ ಬಗ್ಗೆ ಮಾಹಿತಿ ಇದ್ದು, ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಮನವಿ ಸಲ್ಲಿಕೆಯಾಗಿದೆ.

English summary
The Vishwa Hindu Parishad has urged To Ban On Stalls of Muslim Traders In Chamundeshwari Temple in Chamundi Hills, Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X