'ಶಾಸಕ ಮಹದೇವ್ ಕುಟುಂಬಕ್ಕೆ ನಿಷ್ಠರಾಗಿದ್ದಾರಾ' ವಿಡಿಯೋ ವೈರಲ್
ಮೈಸೂರು, ಜುಲೈ 6: ಪಿರಿಯಾಪಟ್ಟಣ ಶಾಸಕ ಕೆ. ಮಹದೇವ್ ಅವರ ಮಗಳು ಎಂದು ಹೇಳಿಕೊಂಡು ಅವರ ವಿರುದ್ಧ ವಾಗ್ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜೆಡಿಎಸ್ ಶಾಸಕ ಕೆ.ಮಹದೇವ್ ಅವರ ಮೊದಲ ಪತ್ನಿಯ ಮಗಳು ಎಂದು ಹೇಳಿಕೊಂಡ ಶಾಲಿನಿ ಎಂಬುವವರು, ಮಹದೇವ್ ಅವರು ನಮಗೆ ಮೋಸ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ತಮಗೆ ಬಿಜೆಪಿಯಿಂದ 40 ಕೋಟಿ ಆಮಿಷ ಒಡ್ಡಿದ್ದರೂ ತಾವು ಪಕ್ಷಕ್ಕೆ ನಿಷ್ಠರಾಗಿ ಉಳಿದಿದ್ದಾಗಿ ಎರಡು ದಿನಗಳ ಹಿಂದೆ ಶಾಸಕ ಮಹದೇವ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನೇ ಮುಂದಿಟ್ಟುಕೊಂಡ ಮಹಿಳೆ, ಶಾಸಕರು ಇದೇ ನಿಷ್ಠೆಯನ್ನು ಕುಟುಂಬದ ವಿಷಯದಲ್ಲೂ ತೋರಬೇಕಿತ್ತು ಎಂದು ವಿಡಿಯೋದಲ್ಲಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹದೇವ್ ಅವರೇ ನಿಮ್ಮ ಈ ಸ್ವಾಭಿಮಾನ, ನಿಷ್ಠೆ ಕುಟುಂಬಕ್ಕೂ ಇದ್ದಿದ್ದರೆ ನಾನು, ನನ್ನ ತಾಯಿ ಕೆ.ಆರ್.ನಗರ ತಾಲ್ಲೂಕಿನ ಸಾಲಿಗ್ರಾಮದಲ್ಲಿ ಕೂಲಿ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕಿರಲಿಲ್ಲ. ವರದಕ್ಷಿಣೆ ರೂಪದಲ್ಲಿ ಚಿನ್ನ ತರಲಿಲ್ಲ ಎಂದು ಆಳಿಗಿಂತ ಕೀಳಾಗಿ ಕಂಡು, ಊಟ ಹಾಕದೆ, ಹೆಣ್ಣು ಮಗಳಿದ್ದಾಳೆ ಎಂಬುದನ್ನೂ ಪರಿಗಣಿಸದೆ ಪತ್ನಿಯನ್ನು ಮನೆಯಿಂದ ಹೊರ ಹಾಕುವಾಗ ನಿಮ್ಮ ನಿಷ್ಠೆ, ಸ್ವಾಭಿಮಾನ ಎಲ್ಲಿ ಹೋಗಿತ್ತು? ನನ್ನ ವಿಡಿಯೊ ಹೇಳಿಕೆ ಸುಳ್ಳು ಎಂದು ನೀವು ನಿರಾಕರಿಸುವುದಿದ್ದರೆ ಒಮ್ಮೆ ನಮ್ಮ ಮುಂದೆ ನಿಂತು ಮಾತನಾಡಿ. ಆಗ ನಿಮ್ಮ ನಿಷ್ಠೆ ಏನು ಎಂಬುದನ್ನು ಸಾಮಾಜಿಕ ಜಾಲತಾಣದ ಮೂಲಕವೇ ಜಗಜ್ಜಾಹೀರುಗೊಳಿಸುವೆ. ಮಹದೇವ್ ಅವರು ತಮ್ಮ ಕುಟುಂಬಕ್ಕೆ ನಿಷ್ಠರಾಗಿದ್ದಾರಾ? ನಮಗೆ ನ್ಯಾಯ ಕೊಟ್ಟಿದ್ದಾರಾ ಎಂಬುದನ್ನು ಮೊದಲು ಹೇಳಲಿ ಎಂದು ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಮಹದೇವ್, ನನ್ನ ರಾಜಕೀಯ ವೈರಿಗಳು ನಡೆಸಿಕೊಂಡು ಬಂದಿರುವ ಕುತಂತ್ರವಿದು. ನನಗೆ ಇಬ್ಬರು ಗಂಡು ಮಕ್ಕಳಿದ್ದಾರೆ ಅಷ್ಟೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಇದು ಮಾಜಿ ಶಾಸಕನ ಪಿತೂರಿ. ದುಡ್ಡಿಗಾಗಿ ಇಂಥ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ತಿಳಿಸಿದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications