ಮೈಸೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆಗಾಗಿ ಧರ್ಮದೇಟು; ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು
ಮೈಸೂರು, ನವೆಂಬರ್ 29: ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿ ಗ್ರಾಮಸ್ಥರಿಂದ ಧರ್ಮದೇಟು ತಿಂದು ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದ ಸಿದ್ದರಾಜು ಮೃತ ವ್ಯಕ್ತಿಯಾಗಿದ್ದು, ಭಾನುವಾರ ರಾತ್ರಿ ಬ್ಯಾಳಾರುಹುಂಡಿ ಗ್ರಾಮದ ಮಹಿಳೆಯ ಜೊತೆ ಸಿದ್ದರಾಜು ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ತೀವ್ರ ಅಸ್ವಸ್ಥನಾಗಿದ್ದ ಸಿದ್ದರಾಜುನನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲುಪುತ್ತಿದ್ದಂತೆ ಸಿದ್ದರಾಜು ಮೃತಪಟ್ಟಿದ್ದಾನೆ. ರಾತ್ರಿ ಪೂರ್ತಿ ಠಾಣೆಯಲ್ಲೇ ಕಳೆದಿದ್ದ ಸಿದ್ದರಾಜುನನ್ನು ಸೋಮವಾರ ಬೆಳಿಗ್ಗೆ ಗ್ರಾಮಸ್ಥರು ಪ್ರಕರಣ ದಾಖಲಿಸಿದ ನಂತರ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವುದು ವಿಳಂಬವಾಗಿದ್ದೇ ಸಿದ್ದರಾಜು ಸಾವಿಗೆ ಕಾರಣ ಎನ್ನಲಾಗಿದೆ.

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾಗಿ ಬ್ಯಾಳಾರಹುಂಡಿ ಗ್ರಾಮಸ್ಥರು ಸಿದ್ದರಾಜು ವಿರುದ್ದ ದೂರು ನೀಡಿದ್ದಾರೆ. ಮತ್ತೊಂದೆಡೆ ಬ್ಯಾಳಾರಹುಂಡಿ ಗ್ರಾಮಸ್ಥರು ನಡೆಸಿದ ಹಲ್ಲೆ ಕಾರಣ ಸಿದ್ದರಾಜು ಮೃತಪಟ್ಟಿದ್ದಾನೆಂದು ಆರೋಪಿಸಿರುವ ಪೋಷಕರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಗ್ರಾಮಸ್ಥರ ಹಲ್ಲೆಯಿಂದ ಸಿದ್ದರಾಜು ಮೃತಪಟ್ಟನೇ? ಅಸ್ವಸ್ಥನಾದ ಸಿದ್ದರಾಜುಗೆ ಚಿಕಿತ್ಸೆ ಕೊಡಿಸಲು ವಿಳಂಬ ಮಾಡಿದ್ದೇಕೆ? ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಲ್ಲಿ ವಿಳಂಬ ಮಾಡಿದ ಕಾರಣ ಮೃತಪಟ್ಟನೇ? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ. ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್ಪಿ ಆರ್. ಚೇತನ್ ಭೇಟಿ ನೀಡಿದ್ದು, ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
Recommended Video
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications