ಭಿಕ್ಷುಕನನ್ನು ಗ್ರಾ.ಪಂ ಚುನಾವಣೆಗೆ ನಿಲ್ಲಿಸಿದ ಬೊಕ್ಕಹಳ್ಳಿ ಯುವಕರು
ಮೈಸೂರು, ಡಿಸೆಂಬರ್ 21: ನಿಮಗೆ ದಿ.ಡಾ.ವಿಷ್ಣುವರ್ಧನ್ ಅಭಿನಯದ "ಸಿಂಹಾದ್ರಿಯ ಸಿಂಹ' ಚಲನಚಿತ್ರ ನೆನಪಿರಬಹುದು. ಅದರಲ್ಲಿ ವಿಷ್ಣುವರ್ಧನ್ ಒಬ್ಬ ದಾರಿಹೋಕ ಭಿಕ್ಷುಕನನ್ನು ಎಂಎಲ್ಎ ಮಾಡುತ್ತಾನೆ.
ಅದೇ ಸಿನಿಮೀಯ ರೀತಿಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದ ಯುವಕರು ಈ ಬಾರಿ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ನಿರ್ಗತಿಕ ವ್ಯಕ್ತಿಯೊಬ್ಬನನ್ನು ಗ್ರಾಮ ಪಂಚಾಯತಿ ಚುನಾವಣೆಗೆ ನಿಲ್ಲಿಸಿದ್ದಾರೆ.
ಇದು ನಂಜನಗೂಡಿನ ಹುಳಿಮಾವು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಗ್ರಾಮವಾಗಿದ್ದು, ಬೊಕ್ಕಹಳ್ಳಿ ಗ್ರಾಮದ ನಿವಾಸಿ ಅಂಕನಾಯಕ ಎಂಬುವರಿಂದ ನಾಮಪತ್ರ ಸಲ್ಲಿಕೆ ಮಾಡಿಸಿದ್ದಾರೆ. ಯುವಕರ ಈ ನಿರ್ಧಾರಕ್ಕೆ ದಿವಂಗತ ಡಾ.ವಿಷ್ಣುವರ್ಧನ್ ಅವರ "ಸಿಂಹಾದ್ರಿಯ ಸಿಂಹ' ಚಲನಚಿತ್ರ ಪ್ರೇರಣೆಯಾಗಿದೆ.

ಊರೂರು ತಿರುಗುತ್ತಾ, ಒಂದೊತ್ತಿನ ಊಟಕ್ಕೂ ಅಲೆಯುತ್ತಿರುವ ಭಿಕ್ಷುಕ ಅಂಕನಾಯಕ ಈಗ ಗ್ರಾಮ ಪಂಚಾಯತಿ ಚುನಾವಣೆಯ ಅಭ್ಯರ್ಥಿ. ಈತ ನಿರ್ಗತಿಕನಾಗಿದ್ದು, ಗ್ರಾಮದ ಬಸ್ ನಿಲ್ದಾಣ ಮತ್ತು ಅಲ್ಲಲ್ಲಿ ವಾಸ ಮಾಡುತ್ತಿದ್ದ ಅಂಕನಾಯಕ ಈಗ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾನೆ.
ಅಂಕನಾಯಕನನ್ನು ಗ್ರಾಮದ ಯುವಕರು ಯಾವ ರೀತಿ ತಯಾರು ಮಾಡಿದ್ದಾರೆ ಅಂದರೆ ಶ್ವೇತ ವರ್ಣದ ಶರ್ಟ್ ಧರಿಸಿ, ಕೂಲಿಂಗ್ ಗ್ಲಾಸ್ ಹಾಕಿಕೊಂಡು ಊರಲ್ಲೆಲ್ಲಾ ಕಾರಿನಲ್ಲಿ ಓಡಾಡುತ್ತಾ ಓಟ್ ಕೇಳುತ್ತಿದ್ದಾನೆ.
ಅಂಕನಾಯಕ ವಿಶೇಷ ಚೇತನರಾಗಿದ್ದು, ಹಲವಾರು ವರ್ಷಗಳಿಂದ ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದಾನೆ. ಮೊದಲೆಲ್ಲ ನಿತ್ಯವೂ ಒಂದು ಹೊತ್ತಿನ ಊಟಕ್ಕೆ ಹತ್ತು ಮನೆ ತಿರುಗುತ್ತಿದ್ದ ಈತನಿಗೆ ಈಗ ನಿತ್ಯ ಕನಿಷ್ಟ ಊಟವಂತೂ ದೊರೆಯುತ್ತಿದೆ. ಗ್ರಾಮದ ಯುವಕರ ಈ ನಿರ್ಧಾರಕ್ಕೆ ಕಾರಣವೇನೆಂದರೆ ಈ ಹಿಂದೆಲ್ಲ ಚುನಾಯಿಸಿ ಕಳಿಸಿದ್ದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮದ ಅಭಿವೃದ್ಧಿಗೆ ಯಾವುದೇ ಕೆಲಸ ಮಾಡದಿರುವುದು.

ಕೆಲಸ ಮಾಡದಿದ್ದರೂ ಹಣ ನೀಡಿ ಚುನಾವಣೆ ಗೆಲ್ಲುತ್ತಿದ್ದರು. ಹಾಗಾಗಿ ಈ ಬಾರಿ ಹಣ ನೀಡಿ ಮತ ಪಡೆಯಲು ಸಾಧ್ಯವಿಲ್ಲದ ಭಿಕ್ಷುಕನನ್ನು ಚುನಾವಣೆಗೆ ನಿಲ್ಲಿಸಿ ನಾವೂ ಹಣ ಪಡೆಯದೆ ಇವರನ್ನೇ ಗೆಲ್ಲಿಸಲು ಪ್ರಯತ್ನ ನಡೆಸಿದ್ದೇವೆ ಎಂದು ಯುವಕರು ತಿಳಿಸಿದ್ದಾರೆ.
ಅಂಕನಾಯಕರಿಗೆ ಪ್ರತಿಸ್ಪರ್ಧಿಯಾಗಿ ಮತ್ತೊಬ್ಬರು ಸ್ಪರ್ಧೆ ಮಾಡಿದ್ದಾರೆ. ಇದೇ ಡಿಸೆಂಬರ್ 27 ರಂದು ಹುಳಿಮಾವು ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications