ಬತ್ತಿದ ಶಿಂಷಾ ನದಿ ಒಡಲು, ಚನ್ನಪಟ್ಟಣ ಜನತೆಯಿಂದ ಎಚ್ಚರಿಕೆ
ಚನ್ನಪಟ್ಟಣ,ಮಾರ್ಚ್,21: ಬೇಸಿಗೆ ಝಳದಿಂದ ಶಿಂಷಾ ನದಿ ನೀರು ಸಂಪೂರ್ಣ ಇಂಗಿದ್ದು, ಜೀವ ಹನಿಗಾಗಿ ಜನರು ಒದ್ದಾಡುತ್ತಿದ್ದಾರೆ. ಆದರೂ ಈ ನದಿ ನೀರನ್ನು ಪಕ್ಕದ ಮದ್ದೂರಿನ ಗ್ರಾಮದ ಕೆರೆಗಳಿಗೆ ಹರಿಸುತ್ತಿರುವ ಕ್ಷೇತ್ರದ ಶಾಸಕ ತಮ್ಮಣ್ಣ ಅವರ ಕ್ರಮವನ್ನು ಖಂಡಿಸಿದ ಮದ್ದೂರು ಜನತೆಗೆ ಕೊನೆಗೂ ಫಲ ಸಿಕ್ಕಿದೆ.
ಶಿಂಷಾನದಿಯಿಂದ ಪಕ್ಕದ ಮದ್ದೂರಿನ ಕೆರೆಗಳಿಗೆ ನೀರು ನೀಡುತ್ತಿರುವುದನ್ನು ಗಮನಿಸಿದ ನೂರಾರು ಜನರು ಇಗ್ಗಲೂರು ಶಿಂಷಾನದಿಯ ದೇವೆಗೌಡ ಬ್ಯಾರೆಜ್ ಬಳಿ ನೀರು ಸರಬರಾಜು ಮಾಡುತ್ತಿದ್ದ ಮೋಟಾರ್ ವಾಹನಗಳನ್ನು ನಿಲ್ಲಿಸಿ ಪ್ರತಿಭಟನೆ ಕೈಗೊಂಡ ಪರಿಣಾಮ ತಕ್ಷಣ ಅಲ್ಲಿನ ಇಂಜಿನಿಯರ್ ಗಳ ಮುಖಾಂತರ ನೀರು ಸರಬರಾಜು ಮಾಡುತ್ತಿದ್ದ ಮೋಟಾರ್ ಗಳನ್ನು ನಿಲುಗಡೆ ಮಾಡಿದ್ದಾರೆ.[85 ಅಡಿಗೆ ಕುಸಿದ ಕೆಆರ್ ಎಸ್ ನೀರಿನ ಮಟ್ಟ]

ಘಟನೆಯ ವಿವರ:
ಶಿಂಷಾ ನದಿಯು ಮಂಡ್ಯ, ಚನ್ನಪಟ್ಟಣ ಜನರ ಜೀವನಕ್ಕೆ ಆಧಾರವಾಗಿದೆ. ಆದರೆ ಬೇಸಿಗೆಯ ಬೇಗೆಗೆ ಶಿಂಷಾ ನದಿಯ ಒಡಲು ಬರಿದಾಗುತ್ತಿದೆ. ಆದರೂ ಮದ್ದೂರು ಗ್ರಾಮದ ಜನರು ಹಾಗೂ ಅಲ್ಲಿನ ಕೆಲವು ರಾಜಕೀಯ ಮುಖಂಡರುಗಳು ಶಿಂಷಾ ನದಿ ನೀರನ್ನು ಮೋಟಾರು ವಾಹನಗಳ ಮೂಲಕ ಮದ್ದೂರಿನ ಜನತೆಗೆ ಸರಬರಾಜು ಮಾಡಲು ಪ್ರಯತ್ನಿಸುತ್ತಿದ್ದರು.[ಕಳಸಾ-ಬಂಡೂರಿಗಾಗಿ ಏ.18ರಂದು ಕರ್ನಾಟಕ ಬಂದ್]
ರಾಜಕೀಯ ಮುಖಂಡರುಗಳ ನೀತಿಯನ್ನು ಖಂಡಿಸಿದ ಚನ್ನಪಟ್ಟಣದ ಜನರು ಇಡೀ ಗ್ರಾಮವೇ ನೀರಿಲ್ಲದೆ ಬವಣೆ ಪಡುತ್ತಿರುವಾಗ ಪಕ್ಕದ ಮದ್ದೂರು ಗ್ರಾಮದ ಕೆರೆಗಳಿಗೆ ನೀರು ಬಿಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ'? ಎಂದು ಭಾನುವಾರ ಕೈಗೊಂಡ ಪ್ರತಿಭಟನೆಯಲ್ಲಿ ಪ್ರಶ್ನಿಸಿದ್ದಾರೆ. [ಜಲಾಶಯಗಳ ನೀರು ಕುಡಿಯುವ ನೀರಿಗಾಗಿ ಮಾತ್ರ]
ಕೊನೆಗೆ ಇವರ ಒತ್ತಾಯಕ್ಕೆ ಮಣಿದ ಪೊಲೀಸ್ ಅಧಿಕಾರಿಗಳು ಹಾಗೂ ಎಂಜಿನಿಯರ್ ಗಳು ನೀರು ಸರಬರಾಜು ಪ್ರಕ್ರಿಯೆಯನ್ನು ಸದ್ಯಕ್ಕೆ ಕೈಬಿಟ್ಟಿದ್ದಾರೆ. ಆದರೆ ಈ ಘಟನೆ ಪುನಃ ಮರುಕಳಿಸಿದರೆ ಬೇರೆ ರೀತಿಯ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications