ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಿಂಟೇಜ್ ಕಾರುಗಳ ಮ್ಯೂಸಿಯಂ-ಏನೆಲ್ಲ ವಿಶೇಷತೆಗಳಿವೆ ಗೊತ್ತಾ?
ಮೈಸೂರು, ಏಪ್ರಿಲ್, 05: ಸಾಂಸ್ಕೃತಿಕ ನಗರಿ ಅಂತಲೇ ಹೆಸರುವಾಸಿ ಆಗಿರುವ ಮೈಸೂರಿನ ಹೊರವಲಯದಲ್ಲಿ "ಪಯಣ" ಎಂಬ ಹೆಸರಿನಲ್ಲಿ ವಿಟೇಜ್ ಕಾರುಗಳ ಸಂಗ್ರಹದ ಅದ್ಭುತ ಮ್ಯೂಸಿಯಂ ತಲೆ ಎತ್ತಿದೆ. ಇದು ಥೇಟ್ ಕಾರ್ ಟೈಯರ್ ರೀತಿಯಲ್ಲೇ ನಿರ್ಮಾಣವಾಗಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಹಾಗಾದರೆ ಇದನ್ನು ಸ್ಥಾಪನೆ ಮಾಡಿದ್ದು ಯಾರು ಹಾಗೂ ಇಲ್ಲಿ ಏನೆಲ್ಲ ವಿಶೇಷತೆಗಳನ್ನು ಕಾಣಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಮ್ಯೂಸಿಯಂ ಎಂಥವರನ್ನು ತನ್ನತ್ತ ಸೆಳೆದುಬಿಡುತ್ತದೆ. ಮೊದಲೇ ಮೈಸೂರು ಪ್ರವಾಸಿ ತಾಣಗಳಲ್ಲಿ ಒಂದು ಸುಂದರ ತಾಣವಾಗಿದೆ. ಅಲ್ಲದೆ ಪ್ರವಾಸಿಗರ ಮೆಚ್ಚುಗೆಗೂ ಪಾತ್ರವಾಗಿದೆ. ಮೈಸೂರಿನ ಹೊರವಲಯದಲ್ಲಿರುವ ಈ ಪಯಣ ವಿಂಟೇಜ್ ಕಾರ್ ಮ್ಯೂಸಿಯಂ ಅನ್ನು ಈ ವಾರದ ಆರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಅದ್ಭುತವಾಗಿ ವಿನ್ಯಾಸಗೊಳಿಸಲಾದ ಈ ವಸ್ತುಸಂಗ್ರಹಾಲಯದಲ್ಲಿ ಕಳೆದ ಐದು ದಶಕಗಳಲ್ಲಿ ಸಂಗ್ರಹಿಸಲಾದ ಆಟೋಮೊಬೈಲ್ಗಳ ಸಂಗ್ರಹವನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಈ ವಸ್ತುಸಂಗ್ರಹಾಲಯವನ್ನು ಕಾರಿನ ಟೈರ್ನ ಹೊರಭಾಗದ ರೀತಿಯಲ್ಲೇ ನಿರ್ಮಾಣವಾಗಿದೆ.ಇನ್ನು ಇದು ಧರ್ಮಸ್ಥಳದಲ್ಲಿರುವ ಪ್ರಸಿದ್ಧ 'ಮಂಜೂಷಾ' ಕಾರ್ ಮ್ಯೂಸಿಯಂನ ಒಂದು ಭಾಗವಾಗಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಬಳಸಿರುವ ವಿಂಟೇಜ್ ಕಾರುಗಳನ್ನು ಸಹ ಈ ವಸ್ತುಸಂಗ್ರಹಾಲಯದಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.
ಒಂದು ಕಾಲದಲ್ಲಿ ಮೈಸೂರು ಮಹಾರಾಜರ ಒಡೆತನದಲ್ಲಿದ್ದ ಅದ್ಭುತ ಕಾರುಗಳು, ಅತ್ಯಾಕರ್ಷಕ ಜೀಪ್ಗಳನ್ನು ಈ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಇಲ್ಲಿ ವಿಶಾಲವಾದ ದೊಡ್ಡ ಗ್ಯಾಲರಿಗಳನ್ನು ನಿರ್ಮಾಣ ಮಾಡಲಾಗಿದ್ದು, ಇಲ್ಲಿಗೆ ಭೇಟಿ ನೀಡಿದ ಪ್ರವಾಸಿಗರು ಪ್ರತಿ ವಿಂಟೇಜ್ ಕಾರಿನ ಹಿಂದಿನ ರೋಚಕ ಕಥೆಗಳನ್ನು ತಿಳಿದುಕೊಳ್ಳಬಹುದಾಗಿದೆ.
ವಸ್ತುಸಂಗ್ರಹಾಲಯವು ಬಯಲು ರಂಗಮಂದಿರ, ಫುಡ್ ಕೋರ್ಟ್ ಮತ್ತು ಆಟದ ಮೈದಾನವನ್ನು ಸಹ ಒಳಗೊಂಡಿದೆ. ಈ ಪಯಣ ವಿಂಟೇಜ್ ಕಾರ್ ಮ್ಯೂಸಿಯಂ ಉದ್ಘಾಟನೆಯು ಮೈಸೂರಿನ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
-
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ











Click it and Unblock the Notifications