ನೀತಿ ಸಂಹಿತೆ ಉಲ್ಲಂಘನೆ:ನಿಖಿಲ್,ಸುಮಲತಾ ವಿರುದ್ಧ ಪ್ರತ್ಯೇಕ ಎಫ್ ಐಆರ್ ದಾಖಲು
ಮೈಸೂರು, ಏಪ್ರಿಲ್ 11:ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಂಡ್ಯ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಪ್ರತ್ಯೇಕ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿ ತೆಂಗಿನ ತೋಟದಲ್ಲಿ ಕಾರ್ಯಕರ್ತರಿಗೆ ಊಟ ಹಂಚಿದ ಆರೋಪದ ಮೇಲೆ ಅಭ್ಯರ್ಥಿ ನಿಖಿಲ್ ಮತ್ತು ಬೆಂಬಲಿಗ ಕನಘಟ್ಟ ಶ್ರೀನಿವಾಸ್ ವಿರುದ್ಧ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀತಿ ಸಂಹಿತೆ ನೆಪದಲ್ಲಿ ದೇವರ ದಾಸಿಮಯ್ಯಗೆ ಅಪಮಾನ : ಖಂಡನೆ
ಹಾಗೆಯೇ ನಾಗಮಂಗಲ ವ್ಯಾಪ್ತಿಯಲ್ಲಿ ಅನುಮತಿ ಪಡೆದದ್ದಕ್ಕಿಂತ ಹೆಚ್ಚು ಸಮಯ ಪ್ರಚಾರ ನಡೆಸಿದ ಆರೋಪದಡಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಬೆಂಬಲಿಗ ರವಿಕಾಂತ ಎಂಬುವವರ ವಿರುದ್ಧ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗಮಂಗಲ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 8:30ಕ್ಕೆ ನಡೆಯಬೇಕಿದ್ದ ಸುಮಲತಾ ಪ್ರಚಾರ, ತಡವಾಗಿ 11:30 ಕ್ಕೆ ಆರಂಭವಾಗಿತ್ತು. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
'ನಮೋ ಟಿವಿ' ಹಿಂದಿ ಸುದ್ದಿ ವಾಹಿನಿ ಅಲ್ಲ: ಟಾಟಾ ಸ್ಕೈ ಸ್ಪಷ್ಟನೆ
ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಈಗಾಗಲೇ ನಿಖಿಲ್ ವಿರುದ್ಧ 16 ಪ್ರಕರಣ ದಾಖಲಾಗಿದ್ದವು. ಇದೀಗ ಬುಧವಾರ ನಡೆದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವೂ ಸೇರಿ ಒಟ್ಟು 17 ಪ್ರಕರಣ ದಾಖಲಾದಂತಾಗಿದೆ.