ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು-ಬೆಳಗಾವಿ ರೈಲ್ವೆ ಪ್ರಯಾಣಿಕರ ಗಮನಕ್ಕೆ

|
Google Oneindia Kannada News

ಮೈಸೂರು, ಜನವರಿ 07 : ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ಬೆಳಗಾವಿ-ಮೈಸೂರು ನಡುವೆ ಮಾತ್ರ ಸಂಚಾರ ನಡೆಸಲಿದೆ. ಮೈಸೂರು-ಹುಬ್ಬಳ್ಳಿ ನಡುವೆ ಸಂಚಾರ ನಡೆಸುತ್ತಿದ್ದ ರೈಲನ್ನು ನವೆಂಬರ್ 1ರಿಂದ ಬೆಳಗಾವಿ ತನಕ ವಿಸ್ತರಣೆ ಮಾಡಲಾಗಿತ್ತು.

ರೈಲು ನಂಬರ್ 17325/26 ವಿಶ್ವಮಾನ ಎಕ್ಸ್‌ಪ್ರೆಸ್ ರೈಲು ಅಶೋಕಪುರಂ- ಬೆಳಗಾವಿ ನಡುವೆ ಸಂಚಾರ ನಡೆಸುತ್ತಿತ್ತು. ಆದರೆ, ಜನವರಿ 13ರಿಂದ ರೈಲು ಮೈಸೂರು-ಬೆಳಗಾವಿ ನಡುವೆ ಮಾತ್ರ ಸಂಚರಿಸಲಿದೆ ಎಂದು ಪ್ರಕಟಣೆ ಹೇಳಿದೆ.

ವಿಶ್ವಮಾನ ಎಕ್ಸ್‌ಪ್ರೆಸ್ ಬೆಳಗಾವಿ ತನಕ ವಿಸ್ತರಣೆ, ವೇಳಾಪಟ್ಟಿವಿಶ್ವಮಾನ ಎಕ್ಸ್‌ಪ್ರೆಸ್ ಬೆಳಗಾವಿ ತನಕ ವಿಸ್ತರಣೆ, ವೇಳಾಪಟ್ಟಿ

Vishwamanava Express Train Will Not Run From Ashokapuram

ಕಾರಣಾಂತರಗಳಿಂದಾಗಿ ಅಶೋಕಪುರಂನಿಂದ ರೈಲು ಸಂಚಾರ ನಡೆಸುವುದಿಲ್ಲ ಎಂದು ನೈಋತ್ಯ ರೈಲ್ವೆ ಹೇಳಿದೆ. ಉಳಿದಂತೆ ರೈಲಿನ ವೇಳಾಪಟ್ಟಿ, ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ದೇಶದಲ್ಲಿ ಓಡಾಡಲಿದೆ ಖಾಸಗಿ ರೈಲು: ಎಲ್ಲೆಲ್ಲಿ ಇರಲಿದೆ ಸಂಚಾರ?ದೇಶದಲ್ಲಿ ಓಡಾಡಲಿದೆ ಖಾಸಗಿ ರೈಲು: ಎಲ್ಲೆಲ್ಲಿ ಇರಲಿದೆ ಸಂಚಾರ?

ವೇಳಾಪಟ್ಟಿ : ಬೆಳಗ್ಗೆ 5.15ಕ್ಕೆ ಮೈಸೂರಿನಿಂದ ಹೊರಡುವ ರೈಲು ಸಂಜೆ 6.53ಕ್ಕೆ ಹುಬ್ಬಳ್ಳಿಗೆ ತಲುಪಲಿದೆ. ರಾತ್ರಿ 7.32ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 11.15ಕ್ಕೆ ಬೆಳಗಾವಿಗೆ ತಲುಪಲಿದೆ.

ರೈಲು ಪ್ರಯಾಣ ದರ ಹೆಚ್ಚಳಕ್ಕೆ ಪ್ರಧಾನಿ ಕಾರ್ಯಾಲಯ ಒಪ್ಪಿಗೆರೈಲು ಪ್ರಯಾಣ ದರ ಹೆಚ್ಚಳಕ್ಕೆ ಪ್ರಧಾನಿ ಕಾರ್ಯಾಲಯ ಒಪ್ಪಿಗೆ

ಬೆಳಗಾವಿಯಿಂದ ಬೆಳಗ್ಗೆ 5ಕ್ಕೆ ಹೊರಡುವ ರೈಲು 8.25ಕ್ಕೆ ಹುಬ್ಬಳ್ಳಿ ತಲುಪಲಿದೆ. 8.45ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 9.15ಕ್ಕೆ ಮೈಸೂರು ತಲುಪಲಿದೆ.

ವಿಶ್ವಮಾನವ ಎಕ್ಸ್‌ಪ್ರೆಸ್ ರೈಲು ಮೈಸೂರು-ಹುಬ್ಬಳ್ಳಿ ನಡುವೆ ಸಂಚಾರ ನಡೆಸುತ್ತಿತ್ತು. 2019ರ ನವೆಂಬರ್ 1ರಿಂದ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲಾಗಿತ್ತು.

ಬೆಳಗಾವಿ ಜನರ ಬೇಡಿಕೆ ಹಿನ್ನಲೆಯಲ್ಲಿ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಹೇಳಿತ್ತು.

English summary
Mysuru-Belagavi Vishwamanava express train will not run from Ashokapuram railway station from January 13, 2020. Train will run between Mysuru and Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X