"ವಿಶ್ವನಾಥ್ ಪುಸ್ತಕ ಬ್ಲಾಕ್ ಮೇಲ್ ತಂತ್ರ" ಎಂದ ಮಾಜಿ ಸಂಸದ
ಮೈಸೂರು, ಫೆಬ್ರುವರಿ 1: ಮೈತ್ರಿ ಸರ್ಕಾರದ ಪತನದ ಕುರಿತು ಪುಸ್ತಕ ಬರೆಯುತ್ತೇನೆ ಎಂಬ ವಿಶ್ವನಾಥ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಆರ್.ಧ್ರುವ ನಾರಾಯಣ್, "ನಾನು ಈಗಾಗಲೇ ಹೇಳಿದ್ದೇನೆ, ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಅವರು ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ. ಇದೆಲ್ಲ ಅವರ ಬ್ಲಾಕ್ ಮೇಲ್ ತಂತ್ರ" ಎಂದು ವಾಗ್ದಾಳಿ ನಡೆಸಿದ್ದಾರೆ.
"ವಿಶ್ವನಾಥ್ ಅವರಿಗೆ ಪುಸ್ತಕ ಬರೆಯಲು ಯಾವುದೇ ನೈತಿಕತೆಯಿಲ್ಲ. ಇದೊಂದು ಬ್ಲಾಕ್ ಮೇಲ್ ಮಾಡುವ ತಂತ್ರ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿತ್ತು. ಸಚಿವರನ್ನಾಗಿಯೂ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ ಜೆಡಿಎಸ್ ಗೆ ಹೋಗಿದ್ದರು. ಜೆಡಿಎಸ್ ಪಕ್ಷ ಕೂಡ ಶಾಸಕರಾಗಿ, ಪಕ್ಷದ ರಾಜ್ಯಾಧ್ಯಕ್ಷರಾಗಿ ಮಾಡಿದ್ದರು. ಆದರೆ ಅವರಿಗೂ ಮೋಸ ಮಾಡಿ ಬಿಜೆಪಿಗೆ ಹೋದರು. ಈಗ ಬಿಜೆಪಿಯಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ" ಎಂದು ಆರೋಪಿಸಿದರು.
"ಬಿಜೆಪಿಯವರಿಗೂ ಯಾವುದೇ ಸಿದ್ಧಾಂತಗಳಿಲ್ಲ. ಯಡಿಯೂರಪ್ಪರವರಿಗೆ ಉತ್ತಮ ಆಡಳಿತ ನೀಡಲು ಸುವರ್ಣ ಅವಕಾಶವಿದೆ. ಆದರೆ ಬಿಜೆಪಿ ಹೈಕಮಾಂಡ್ ಅದಕ್ಕೆ ಅವಕಾಶ ನೀಡುತ್ತಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡಲು ಕೂಡ ಅವರಿಗೆ ಸ್ವತಂತ್ರ ನೀಡುತ್ತಿಲ್ಲ" ಎಂದರು.

ಇಂದು ಬಜೆಟ್ ಮಂಡನೆಯಾಗುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, "ಅಭಿವೃದ್ದಿ ಪರ ಬಜೆಟ್ ಮಂಡನೆ ಮಾಡಲು ಬಿಜೆಪಿಗೆ ಇದು ಸುವರ್ಣ ಅವಕಾಶ. ಈ ಹಿಂದೆ ನೋಟು ಬ್ಯಾನ್ ನಿಂದ ಜಿಡಿಪಿ ಕುಸಿದಿದೆ. ಸಿ.ಎ.ಎ, ಎನ್.ಆರ್.ಸಿ. ಯಂತಹ ಕಾಯ್ದೆ ಜಾರಿಗೆ ತಂದು ಗೊಂದಲ ಸೃಷ್ಟಿಸಿದ್ದಾರೆ. ಈ ಬಾರಿ ಅಭಿವೃದ್ಧಿ ಪರ ಬಜೆಟ್ ಅನ್ನು ನಿರೀಕ್ಷೆ ಮಾಡುತ್ತಿದ್ದೇವೆ" ಎಂದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications