ಬಿಎಸ್ ಎಫ್ ಯೋಧನ ವಿಡಿಯೋ ಮಾಹಿತಿ ಇಲ್ಲ: ವಿಕೆ ಸಿಂಗ್
ಮೈಸೂರು, ಜನವರಿ 10: ಸೇನೆಯಲ್ಲಿ ಊಟ ಎನ್ನುವುದು ಬಹಳ ಮುಖ್ಯ ವಿಚಾರ. ಅಧಿಕಾರಿಗಳು ಏನು ತಿನ್ನುತ್ತಾರೋ ಅದನ್ನೇ ಸೈನಿಕರಿಗೂ ನೀಡುತ್ತಾರೆ ಎಂದು ನಿವೃತ್ತ ಸೇನಾ ಮುಖ್ಯಸ್ಥ ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದರು. ಬಿಎಸ್ ಎಫ್ ಯೋಧರೊಬ್ಬರು ಮಾಡಿದ ಕಳಪೆ ಆಹಾರ ವಿತರಣೆ ಆರೋಪವನ್ನು ಮಂಗಳವಾರ ತಳ್ಳಿ ಹಾಕಿದರು.
ಕಳಪೆ ಊಟ ನೀಡುತ್ತಿರುವ ಬಗ್ಗೆ ಬಿಎಸ್ಎಫ್ ಯೋಧ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಕರಣಕ್ಕೆಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯದ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಅಂತಹ ಘಟನೆ ನಡೆದಿದ್ದರೆ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಸದ್ಯ ಹರಿದಾಡುತ್ತಿರುವ ದೃಶ್ಯದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.[ಬಿಎಸ್ಎಫ್ ಯೋಧನ ಬೆನ್ನಿಗೆ ನಿಂತ ಕ್ರೀಡಾ ತಾರೆಗಳು]

ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಕಡೆ ಬಿಜೆಪಿ ಉತ್ತಮ ಸ್ಥಿತಿಯಲ್ಲಿದೆ. ಉತ್ತರ ಪ್ರದೇಶದಲ್ಲಿ ಏನಾಗಲಿದೆ ಎನ್ನುವುದನ್ನು ಫಲಿತಾಂಶ ಬಂದ ಮೇಲೆ ಹೇಳುತ್ತೇನೆ. ಚುನಾವಣೆಗೆ ಸಮಯ ಇರುವುದರಿಂದ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದರು.
ಪ್ರವಾಸಿ ಭಾರತೀಯ ದಿವಸ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಬೆಂಗಳೂರಿನಲ್ಲಿ ಆಯೋಜನೆ ಉತ್ತಮವಾಗಿತ್ತು ಎಂದರು.[ಬಿಎಸ್ಎಫ್ ಪ್ರಕರಣ: ಮೋದಿ ವಿರುದ್ಧ ಪಾಕ್ ಮಾಧ್ಯಮಗಳ ಪ್ರಹಾರ]
ನಂಜುಂಡೇಶ್ವರನ ದರುಶನ ಪಡೆದ ವಿ.ಕೆ.ಸಿಂಗ್ ದಂಪತಿ
ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವಿ.ಕೆ.ಸಿಂಗ್ ಭೇಟಿ ನೀಡಿದರು. ಪತ್ನಿ ಭಾರತಿ ಸಿಂಗ್ ಸಮೇತ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಧಾನ್ಯಗಳನ್ನು ನೀಡುವ ಮೂಲಕ ನವಗ್ರಹ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಳದ ಅರ್ಚಕರು ದಂಪತಿಗೆ ಪ್ರಸಾದ ವಿತರಿಸಿ, ಆಶೀರ್ವದಿಸಿದರು.[ಅವ್ಯವಸ್ಥೆ ವಿರುದ್ಧ ಸಿಡಿದೆದ್ದ ಯೋಧನ ವಿರುದ್ಧ ಬಿಎಸ್ಎಫ್ ಕಿಡಿ]
ಇನ್ನು ಇದೇ ವೇಳೆ ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯನ್ನು ಭೇಟಿಯಾದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications