ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡು ಶ್ರೀಕಂಠೇಶ್ವರ ಜಾತ್ರೆಯಲ್ಲಿ ಮತದಾನದ ಜಾಗೃತಿ

|
Google Oneindia Kannada News

ಮೈಸೂರು, ಮಾರ್ಚ್ 19 : ರಾಜ್ಯದ ನಾನಾ ಜಿಲ್ಲೆಗಳ ಭಕ್ತರು ಇಂದು ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಜಾತ್ರ ಮಹೋತ್ಸವಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಜಾತ್ರೆಯಲ್ಲಿಯೂ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್‌) ನಂಜನಗೂಡು ಜಾತ್ರೆಯಲ್ಲಿ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ನಂಜನಗೂಡಿನ ಪಂಚರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರನಂಜನಗೂಡಿನ ಪಂಚರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ನಂಜನಗೂಡು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ಎಲೆಕ್ಟ್ರಾನಿಕ್ ಮತಯಂತ್ರ, ವಿವಿಪ್ಯಾಟ್ ಕುರಿತು ಜನರಿಗೆ ಮಾಹಿತಿ ನೀಡಲಾಯಿತು.

ಧಾರವಾಡ : ಹಾಲಿನ ಪ್ಯಾಕೆಟ್ ಮೂಲಕ ಮತದಾನದ ಜಾಗೃತಿಧಾರವಾಡ : ಹಾಲಿನ ಪ್ಯಾಕೆಟ್ ಮೂಲಕ ಮತದಾನದ ಜಾಗೃತಿ

Voters awareness campaign in Nanjangud car festival

'ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಂಡು ತಮ್ಮ ಅತ್ಯಮೂಲ್ಯವಾದ ಮತದಾನ ಹಕ್ಕನ್ನು ಚಲಾಯಿಸಬೇಕು. ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಮತದಾನವು ಬ್ರಹ್ಮಾಸ್ತ್ರವಾಗಿದೆ' ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠ ರಾಜೇ ಅರಸ್ ತಿಳಿಸಿದರು.

ಮೈಸೂರು ಲೋಕಸಭೆ ಕ್ಷೇತ್ರ ಪರಿಚಯಮೈಸೂರು ಲೋಕಸಭೆ ಕ್ಷೇತ್ರ ಪರಿಚಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳು, ಜನಪರ ಕಾಳಜಿ ಹಾಗೂ ದೇಶದ ಅಭಿವೃದ್ಧಿಯ ಮಾನದಂಡ ಇಟ್ಟುಕೊಂಡು ಉತ್ತಮ ಆಡಳಿತ ನಡೆಸುವ ಸರ್ಕಾರವನ್ನು ಆಯ್ಕೆ ಮಾಡುವ ಅವಕಾಶ ನಿಮ್ಮ ಕೈಯಲ್ಲಿದೆ ಚುನಾವಣೆಯ ದಿನ ಮತಗಟ್ಟೆಗೆ ಬಂದು ತಪ್ಪದೇ ಮತದಾನ ಮಾಡಿ ಎಂದು ಜನವರಲ್ಲಿ ಮನವಿ ಮಾಡಲಾಯಿತು.

ಜನರು ಹಣ, ಹೆಂಡ ಹಾಗೂ ಇನ್ನಿತರ ಆಮಿಷಗಳಿಗೆ ಒಳಗಾಗದೆ ಪ್ರಜಾಪ್ರಭುತ್ವದ ಬಲಪಡಿಸಿ, ದೇಶ ಪ್ರಜೆಗಳಿಗೋಸ್ಕರ ಪಾರದರ್ಶಕ ಆಡಳಿತ ನಡೆಸುವ ನಾಯಕರನ್ನು ಆಯ್ಕೆ ಮಾಡಲು ಮುಂದಾಗುವಂತೆ ಕರೆ ನೀಡಲಾಯಿತು.

English summary
Systematic Voter's Education and Electoral Participation (SVEEP) conducted voting awareness campaign in Nanjangud car festival, Mysuru on March 19, 2019. Voting for 2019 Lok sabha elections will be held in Mysuru on April 18, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X